alex Certify ‘ಹಡಗುಗಳ ಮೇಲಿನ ದಾಳಿ ಗಂಭೀರ ಕಳವಳಕಾರಿ ವಿಷಯ’ : ವಿದೇಶಾಂಗ ಸಚಿವ ಜೈಶಂಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹಡಗುಗಳ ಮೇಲಿನ ದಾಳಿ ಗಂಭೀರ ಕಳವಳಕಾರಿ ವಿಷಯ’ : ವಿದೇಶಾಂಗ ಸಚಿವ ಜೈಶಂಕರ್

ನವದೆಹಲಿ : ವ್ಯಾಪಾರಿ ಹಡಗುಗಳ ಮೇಲಿನ ದಾಳಿಯನ್ನು ಅಂತರರಾಷ್ಟ್ರೀಯ ಸಮುದಾಯಕ್ಕೆ ಗಂಭೀರ ಕಳವಳದ ವಿಷಯ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

 ಎರಡು ದಿನಗಳ ಭೇಟಿಗಾಗಿ ಸೋಮವಾರ ಟೆಹ್ರಾನ್ ಗೆ ಆಗಮಿಸಿದ ಜೈಶಂಕರ್, ದ್ವಿಪಕ್ಷೀಯ ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ನಂತರ ತಮ್ಮ ಸಹವರ್ತಿ ಹುಸೇನ್ ಅಮೀರ್-ಅಬ್ದೊಲ್ಲಾಹಿಯಾನ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವ್ಯಾಪಾರಿ ಹಡಗುಗಳ ಮೇಲಿನ ದಾಳಿಯನ್ನು ಇಂತಹ ಬೆದರಿಕೆಗಳು ಭಾರತದ ಇಂಧನ ಮತ್ತು ಆರ್ಥಿಕ ಹಿತಾಸಕ್ತಿಗಳ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು ಅವರು ಹೇಳಿದರು.

ಇತ್ತೀಚಿನ ದಿನಗಳಲ್ಲಿ, ಹಿಂದೂ ಮಹಾಸಾಗರದ ಈ ಪ್ರಮುಖ ಭಾಗದಲ್ಲಿ ಕಡಲ ವಾಣಿಜ್ಯ ಹಡಗುಗಳ ಸುರಕ್ಷತೆಗೆ ಹೆಚ್ಚಿನ ಬೆದರಿಕೆ ಇದೆ. ಕೆಂಪು ಸಮುದ್ರದಲ್ಲಿ ಹಡಗುಗಳ ಮೇಲಿನ ದಾಳಿಯನ್ನು ಉಲ್ಲೇಖಿಸಿದ ಅವರು, ಬಿಕ್ಕಟ್ಟನ್ನು ತ್ವರಿತವಾಗಿ ಪರಿಹರಿಸುವುದು ಮುಖ್ಯ ಎಂದು ಒತ್ತಿ ಹೇಳಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...