ಚಿತ್ರದುರ್ಗ : ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರು ಮೂಲದ ನಿರ್ಮಲಾ (55), ವಿನುತಾ (40) ಮೃತ ಮಹಿಳೆಯರು ಎಂದು ಗುರುತಿಸಲಾಗಿದೆ. ಹಾಗೂ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಯಶಸ್ (9) ಎಂಬ ಬಾಲಕ ಮೃತಪಟ್ಟಿದ್ದಾನೆ. ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೇರಿಕೆಯಾಗಿದೆ. ಅಪಘಾತದಲ್ಲಿ ಫಣಿರಾಜ್, ರಶ್ಮಿ ಎಂಬುವವರಿಗೆ ಗಾಯಗಳಾಗಿವೆ.
ಬೆಂಗಳೂರಿನಿಂದ ಕಾರಿನಲ್ಲಿ ಹೊಸಪೇಟೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.