alex Certify ಕಾಮಗಾರಿಯಲ್ಲಿ 650 ಕೋಟಿ ರೂ. ಭಾರಿ ಭ್ರಷ್ಟಾಚಾರ: 28 ಅಧಿಕಾರಿಗಳ ಅಮಾನತುಗೊಳಿಸಿ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮಗಾರಿಯಲ್ಲಿ 650 ಕೋಟಿ ರೂ. ಭಾರಿ ಭ್ರಷ್ಟಾಚಾರ: 28 ಅಧಿಕಾರಿಗಳ ಅಮಾನತುಗೊಳಿಸಿ ಸರ್ಕಾರ ಆದೇಶ

ಕೊಪ್ಪಳ: ತುಂಗಭದ್ರಾ ಎಡದಂಡೆ ಕಾಲುವೆ ನವೀಕರಣ ಕಾಮಗಾರಿಯಲ್ಲಿ ನಡೆದ 650 ಕೋಟಿ ರೂ. ಅಷ್ಟಾಚಾರ ಪ್ರಕರಣದಲ್ಲಿ ಮೂರು ಉಪ ವಿಭಾಗಗಳ ಇಂಜಿನಿಯರಿಂಗ್ ಮತ್ತು ಇತರೆ ಅಧಿಕಾರಿಗಳನ್ನು ಒಳಗೊಂಡ 28 ಮಂದಿಯನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.

2009 ರಿಂದ 2011 ರ ಅವಧಿಯಲ್ಲಿ ತುಂಗಭದ್ರಾ ಎಡದಂಡೆ ಕಾಲುವೆ ನವೀಕರಣ ಕಾಮಗಾರಿ ನಡೆಸಲಾಗಿತ್ತು. 402 ಕೋಟಿ ರೂ. ಕಾಮಗಾರಿಗಳಿಗೆ ಸಂಬಂಧಿಸಿದಂತೆ 1283 ಕೋಟಿ ರೂ. ಮೊತ್ತವನ್ನು ಗುತ್ತಿಗೆದಾರರು ಕ್ಲೇಮ್ ಮಾಡಿದ್ದಾರೆ.

ಈ ಸಂಬಂಧ 13 ಪ್ರಕರಣಗಳನ್ನು ಜಲಸಂಪನ್ಮೂಲ ಇಲಾಖೆ ವಿಚಕ್ಷಣ ದಳ ತನಿಖೆ ನಡೆಸಿದ್ದು, 650 ಕೋಟಿ ರೂ. ಅವ್ಯವಹಾರ ನಡೆದಿರುವುದು ಸಾಬೀತಾಗಿದೆ. ಇಂಜಿನಿಯರ್ ಗಳು, ಕಚೇರಿ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಸೇರಿ ನಕಲಿ ಬಿಲ್ ಸೃಷ್ಟಿಸಿ ಅವ್ಯವಹಾರದಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ಗೊತ್ತಾಗಿದೆ. ಪ್ರಕರಣ ಸಂಬಂಧ ಹಾಲಿ ಕರ್ತವ್ಯದಲ್ಲಿರುವ 28 ಇಂಜಿನಿಯರ್ ಮತ್ತು ಕಚೇರಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ನಿವೃತ್ತ ಹಾಗೂ ನಿಧನರಾದ 18 ಅಧಿಕಾರಿಗಳ ವಿರುದ್ಧವೂ ಕೋರ್ಟ್ ನಲ್ಲಿ ದಾವೆ ಹೂಡಲು ಜಲ ಸಂಪನ್ಮೂಲ ಇಲಾಖೆ ಕ್ರಮಕೈಗೊಂಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...