BIG NEWS: ಕಾಂಗ್ರೆಸ್ ಹೈಕಮಾಂಡ್ ಗೆ ಸಿಎಂ ಸಿದ್ಧರಾಮಯ್ಯ ಸೆಡ್ಡು: ದೆಹಲಿಯಿಂದ ಬಂದ ನಿಗಮ –ಮಂಡಳಿ ಪಟ್ಟಿಗೆ ಸರ್ಜರಿ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆಡ್ಡು ಹೊಡೆದಿದ್ದಾರೆ. ನಿಗಮ, ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಿಂದ ಬಂದಿದ್ದ ಕಾರ್ಯಕರ್ತರ ಪಟ್ಟಿಗೆ ಮುಖ್ಯಮಂತ್ರಿಗಳು ಸರ್ಜರಿ ಮಾಡಿದ್ದಾರೆ.

ಅಂತಿಮವಾಗಿ 34 ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ನಾಮ ನಿರ್ದೇಶನ ಮಾಡಲಾಗಿದೆ. ಕಾರ್ಯಕರ್ತರಿಗೆ ನಿಗಮ ಮಂಡಳಿ ಹಂಚಿಕೆಗೆ ಸಿಎಂ ತೀರ್ಮಾನಿಸಿದ್ದಾರೆ. ದೆಹಲಿಯಿಂದ ಬಂದಿದ್ದ ಪಟ್ಟಿಗೆ ರಾಜ್ಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

39 ಕಾರ್ಯಕರ್ತರ ಪಟ್ಟಿಯನ್ನು ಸಿದ್ಧಪಡಿಸಿ ಹೈಕಮಾಂಡ್ ಕಳುಹಿಸಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮೂಲಕ ಪಟ್ಟಿಯನ್ನು ಎಐಸಿಸಿ ರವಾನೆ ಮಾಡಿದ್ದು, ಕಾರ್ಯಕರ್ತರ ಪಟ್ಟಿಗೆ ಸಿಎಂ, ಡಿಸಿಎಂ ಮುನಿಸಿಕೊಂಡಿದ್ದರು. 39 ಕಾರ್ಯಕರ್ತರ ಪೈಕಿ 7 ಕಾರ್ಯಕರ್ತರಿಗೆ ಕೊಕ್ ಕೊಟ್ಟು ಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read