ಬೆಂಗಳೂರು : ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ದಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ವಾವಲಂಬಿ ಯೋಜನೆಯಡಿ 1 ಲಕ್ಷದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರ ಗಮನಕ್ಕೆ
1. ಸದರಿ ಯೋಜನೆಯಡಿ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗೃಹ/ ಗುಡಿ ಕೈಗಾರಿಕೆ ಇತ್ಯಾದಿ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ಪಡೆದ ಸಾಲಕ್ಕೆ ಸಹಾಯ ಧನ ನೀಡಲಾಗುವುದು.
2. ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ನಿಂದ 2023-24 ನೇ ಸಾಲಿನಲ್ಲಿ ಸ್ವಯಂ ಉದ್ಯೋಗಕ್ಕಾಗಿ ಸಾಲವನ್ನು ಪಡೆದಿರಬೇಕು.
3. ಈ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವುದು.
4. ಸದರಿ ಸಹಾಯಧನಕ್ಕಾಗಿ ಸಲ್ಲಿಸಲಾಗುವ ಅರ್ಜಿಯನ್ನು, ಸಾಲ ಪಡೆದ ಬ್ಯಾಂಕ್ ನಿಂದ ದೃಢೀಕರಣಗೊಳಿಸಿ ಮಂಡಳಿಗೆ ಸಲ್ಲಿಸುವುದು.
ಭರ್ತಿ ಮಾಡಿದ ಅರ್ಜಿಯನ್ನು ಅಧ್ಯಕ್ಷರು/ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, 14/3, ಅನೆಕ್ಸ್ ಕಟ್ಟಡ, 3ನೇ ಮಹಡಿ, ಶ್ರೀ ಅರವಿಂದ ಭವನ, ದಿ ಮಿಥಿಕ್ ಸೊಸೈಟಿ ಆವರಣ, ನೃಪತುಂಗ ರಸ್ತೆ, ಬೆಂಗಳೂರು-01 ಇಲ್ಲಿದೆ ಕಳುಹಿಸಿಕೊಡಬಹುದಾಗಿದೆ.
![](https://kannadadunia.com/wp-content/uploads/2024/01/1-9.jpg)
![](https://kannadadunia.com/wp-content/uploads/2024/01/2-8.jpg)
![](https://kannadadunia.com/wp-content/uploads/2024/01/3-6.jpg)