ಮಂಡ್ಯ : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಜ.28 ರಂದು ನಡೆದ ಹನುಮ ಧ್ವಜ ತೆರವು ವಿರೋಧಿಸಿ ಪ್ರತಿಭಟನೆ ನಡೆಸಿದ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ತಹಶೀಲ್ದಾರ್ ನೀಡಿದ ದೂರಿನ ಮೇರೆಗೆ ಕೆರಗೋಡು ಗ್ರಾಮದ ಪ್ರಕಾಶ್, ಹೊನಗನವಳ್ಳಿ ಮಠ ಗ್ರಾಮದ ಅವಿನಾಶ್ ಸೇರಿ ಹಲವರ ವಿರುದ್ಧ ಎಫ್ ಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಸೆಕ್ಷನ್ 144 ಇದ್ದರೂ ಕೂಡ ಪ್ರತಿಭಟನೆ ನಡೆಸಿದ ಹಿನ್ನೆಲೆ ಹಾಗೂ ಭದ್ರತಾ ಸಿಬ್ಬಂದಿಯನ್ನು ಎಳೆದಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಏನಿದು ವಿವಾದ
ಮಂಡ್ಯದ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿ ಕಟ್ಟಲಾಗಿದ್ದ ಹನುಮ ಧ್ವಜವನ್ನು ಜಿಲ್ಲಾಡಳಿತ ತೆರವುಗೊಳಿಸಿದ ಬೆನ್ನಲ್ಲೇ ನಿಷೇಧಾಜ್ಞೆ ಉಲ್ಲಂಘಿಸಿ ಗ್ರಾಮಸ್ಥರು, ಹಿಂದೂಪರ ಸಂಘಟನೆ ಕಾರ್ಯಕರ್ತರ ಸಮ್ಮುಖದಲ್ಲಿ ಮಹಿಳೆಯರು ಏಣಿ ಮೂಲಕ ಧ್ವಜಸ್ತಂಭ ಹತ್ತಿ ಶ್ರೀರಾಮನ ಫ್ಲೆಕ್ಸ್ ಹಾಗೂ ಕೇಸರಿ ಧ್ವಜವನ್ನು ಕಟ್ಟಿದ್ದರು. ಅಲ್ಲದೇ ಕೇಸರಿ ಬಾವುಟಗಳನ್ನು ಹಿಡಿದು ಗ್ರಾಮಸ್ಥರು ಧ್ವಜಸ್ತಂಭದ ಬಳಿ ನೆರೆದಿದ್ದರು.
ಧ್ವಜಸ್ತಂಭದಲ್ಲಿ ಕಟ್ಟಿದ್ದ ಫ್ಲೆಕ್ಸ್ ಹಾಗೂ ದ್ವಜವನ್ನು ತೆರವುಗೊಳಿಸಲು ಮುಂದಾದ ಪೊಲಿಸರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.. ಈ ವೇಳೆ ಪೊಲೀಸರು ಹಾಗೂ ಯುವಕರ ನಡುವೆ ವಾಗ್ವಾದ ನಡೆದಿದ್ದು, ಯುವಕರನ್ನು ಚದುರಿಸಲು ಪೊಲೀಸರು ಮತ್ತೆ ಲಘು ಲಾಠಿ ಪ್ರಹಾರ ನಡೆಸಿದ್ದರು..ನಂತರ ವಿವಾದಿತ ಧ್ವಜ ಸ್ಥಂಭದ ಮೇಲೆ ಜಿಲ್ಲಾಡಳಿತ ತ್ರಿವಣ ಧ್ವಜ ಹಾರಿಸಿದೆ. ಎಸಿ ನೇತೃತ್ವದಲ್ಲಿ ಪೊಲೀಸರು ಭಾರತದ ತ್ರಿವಣ ಧ್ವಜವನ್ನು ಹಾರಿಸಿದ್ದರು. ನಂತರ ಪ್ರತಿಭಟನೆ ಮತ್ತಷ್ಟು ತಾರಕಕ್ಕೇರಿತ್ತು.