BREAKING NEWS: ಮಾವೋವಾದಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ 3 ಯೋಧರು ಹುತಾತ್ಮ, 14 ಮಂದಿಗೆ ಗಾಯ

ಮಂಗಳವಾರ ಛತ್ತೀಸ್‌ ಗಢದ ಬಿಜಾಪುರ-ಸುಕ್ಮಾ ಗಡಿಯಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಕನಿಷ್ಠ ಮೂವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಸಿಬ್ಬಂದಿ ಸುಕ್ಮಾ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿಗಾ ಇರಿಸಲು ಬಿಜಾಪುರ-ಸುಕ್ಮಾ ಗಡಿಯಲ್ಲಿರುವ ಟೇಕಲ್‌ ಗುಡೆಮ್‌ ನಲ್ಲಿ ಇಂದು ಹೊಸ ಭದ್ರತಾ ಶಿಬಿರವನ್ನು ಸ್ಥಾಪಿಸಲಾಗಿದೆ.

ಶಿಬಿರ ಸ್ಥಾಪಿಸಿದ ನಂತರ, ಜೋನಗುಡ-ಅಲಿಗುಡ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಮಾವೋವಾದಿಗಳು ಕೋಬ್ರಾ/ಎಸ್‌ಟಿಎಫ್/ಡಿಆರ್‌ಜಿ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದರು. ಎನ್‌ಕೌಂಟರ್ ಬಳಿಕ ಮಾವೋವಾದಿಗಳು ಕಾಡಿನಲ್ಲಿ ಪರಾರಿಯಾಗಿದ್ದಾರೆ.

ಗಾಯಗೊಂಡ ಎಲ್ಲಾ 14 ಭದ್ರತಾ ಸಿಬ್ಬಂದಿಯನ್ನು ಸುಧಾರಿತ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ವಿಮಾನದಲ್ಲಿ ರವಾನಿಸಲಾಗಿದೆ. ಈ ತಿಂಗಳ ಆರಂಭದಲ್ಲಿ, ಭದ್ರತಾ ಪಡೆಗಳು ಜಿಲ್ಲೆಯಲ್ಲಿ ಎರಡು ಪೊಲೀಸ್ ಕ್ಯಾಂಪ್‌ಗಳನ್ನು ಸ್ಥಾಪಿಸಿದ್ದವು, ದಟ್ಟ ಅರಣ್ಯದಲ್ಲಿರುವ ಇದನ್ನು ಕೋರ್ ನಕ್ಸಲ್ ಪ್ರದೇಶವೆಂದು ಪರಿಗಣಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read