ಬೆಂಗಳೂರು : ಸರ್ಕಾರವು ಬಡ ಜನತೆಗೆ ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ- ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಕಾರ್ಡ್ ಯೋಜನೆಯಡಿ 5 ಲಕ್ಷ ರೂ.ವರೆಗೆ ಚಿಕಿತ್ಸೆ ಸೌಲಭ್ಯ ಪಡೆಯಬಹುದು.
ಆಯುಷ್ಮಾನ್ ಯೋಜನಾ ಸೌಲಭ್ಯಗಳು :
ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಗಳಿಗೆ ವಾರ್ಷಿಕ 5 ಲಕ್ಷದವರೆಗೂ ಉಚಿತ ಮತ್ತು ಎಪಿಎಲ್ ಕುಟುಂಬಕ್ಕೆ 1.5 ಲಕ್ಷದವರೆಗೂ ಸಹಪಾವತಿ ಆಧಾರದ ಮೇಲೆ ಒಟ್ಟು 1650 ವಿವಿಧ ಬಗೆಯ ಚಿಕಿತ್ಸೆಗಳಿಗೆ ಎಲ್ಲಾ ಸರ್ಕಾರಿ ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ
ತುರ್ತು ಸಂದರ್ಭಗಳಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಚಿಕಿತ್ಸೆ ಪಡೆಯಬಹುದು.
ಆಯುಷ್ಮಾನ್ ಕಾರ್ಡ್ ಸೌಲಭ್ಯಗಳು
ಫಲಾನುಭವಿಗಳಿಗೆ ಉಚಿತವಾಗಿ ಪಿವಿಸಿ ಮಾದರಿಯ ಹೆಲ್ತ್ ಕಾರ್ಡ್ ವಿತರಣೆ
ದೇಶಾದ್ಯಂತ ಶೀಘ್ರ ಚಿಕಿತ್ಸಾ ಸೇವೆ ಪಡೆಯಲು ಅವಕಾಶ
ಹೆಚ್ಚಿನ ಚಿಕಿತ್ಸೆಗಾಗಿ ಮೇಲ್ದರ್ಜೆ ಆಸ್ಪತ್ರೆಗೆ ಆನ್ ಲೈನ್ ಮೂಲಕ ರೆಫರಲ್ ಮಾಡಲು ಅನುಕೂಲ
ಚಿಕಿತ್ಸಾ ಆರೋಗ್ಯ ದತ್ತಾಂಶ ಸಂಗ್ರಹಿಸಿ ನಂತರದ ಚಿಕಿತ್ಸೆ ಸಂದರ್ಭದಲ್ಲಿ ಹಿಂದಿನ ಚಿಕಿತ್ಸಾ ದತ್ತಾಂಶದ ಮೇಲೆ ಶೀಘ್ರ ಚಿಕಿತ್ಸೆಗೆ ಅನುಕೂಲ.
ಆಯುಷ್ಮಾನ್ ಕಾರ್ಡ್ ನೋಂದಣಿ :
ಹತ್ತಿರದ ಗ್ರಾಮ ಒನ್/ ಕರ್ನಾಟಕ ಒನ್/ಬೆಂಗಳೂರು ಒನ್ CSC ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ದಾಖಲೆ ನೀಡಿ ಕಾರ್ಡ್ ಮಾಡಿಸಿಕೊಳ್ಳಬಹುದು.
ನೋಂದಣಿ ಮಾಡಿಕೊಳ್ಳುವ ವಿಧಾನ:
ತಮ್ಮ ಮೊಬೈಲ್ನ ಗೂಗಲ್ ವೆಬ್ಸೈಟ್ನಲ್ಲಿ http://beneficiary.nha.gov.in ಎಂದು ಟೈಪ್ ಮಾಡಿದ ನಂತರ ಪಿ.ಎಮ್.ಜೆ.ವೈ ಬೆನಿಫಿಸಿರಿ ಪೋರ್ಟಲ್ ಕಂಡು ಬರುತ್ತದೆ. ಪೋರ್ಟಲ್ ಅನ್ನು ತೆರೆದಾಗ ಲಾಗಿನ್ ಆಸ್ ಎಂದು ಮಾಹಿತಿ ಕೇಳುವ ಹಂತದಲ್ಲಿ ಬೆನ್ಫಿಸಿರಿ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರದಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಒಟಿಪಿ ಮುಖಾಂತರ ಲಾಗಿನ್ ಮಾಡಿಕೊಳ್ಳಬೇಕು. ಒಟಿಪಿ ನೊಂದಾಯಿಸಿ ಸಬ್ಮಿಟ್ ಮಾಡಿದ ನಂತರ ಪಿ.ಎಮ್.ಜೆ.ವೈ ಪೊರ್ಟಲ್ ಒಪನ್ ಆಗುತ್ತದೆÀ. ಇಲ್ಲಿ ಸಾರ್ವಜನಿಕರು ತಮ್ಮ ರಾಜ್ಯ ಎಂಬಲ್ಲಿ ಕರ್ನಾಟಕ, ಜಿಲ್ಲೆ ಎನ್ನುವಲ್ಲಿ ನಿಮ್ಮ ಜಿಲ್ಲೆಯ ಯಾವುದು ಎಂದು ಅಥವಾ ತಮ್ಮ ಮೂಲ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ಕ್ಲೈಮ್ಟೈಪ್ ಎನ್ನುವಲ್ಲಿ ಕುಟುಂಬ ಎಂದು ಆಯ್ಕೆ ಮಾಡಿಕೊಂಡು ಆಧಾರ್ ಸಂಖ್ಯೆ ನಮೂದಿಸಿ ಸರ್ಚ್ ಮಾಡಬೇಕು.
ಈಗಾಗಲೇ ಎಬಿ.ಪಿ.ಎಮ್.ಜೆ.ವೈ-ಸಿಎಮ್ ಆರೋಗ್ಯ ಕರ್ನಾಟಕ ಕಾರ್ಡ್ ಅನ್ನು ಬೇರೆ ಯಾವುದಾದರೂ ಯೋಜನೆಗೆ ನೋಂದಣಿ (ಇ-ಕೆವೈಸಿ) ಲಿಂಕ್ ಮಾಡಿಕೊಂಡಿದ್ದರೆ ನೇರವಾಗಿ ಪೊರ್ಟಲ್ನಲ್ಲಿ ಕಾರ್ಡ್ ಜನರೇಷನ್ ವೆರಿಪೈ ಎಂದು ಕಂಡು ಬರುತ್ತದೆ. ಒಂದು ವೇಳೆ ಬೇರೆ ಯಾವುದಾದರು ಯೋಜನೆಗೆ ಕಾರ್ಡ್ ಅನ್ನು ನೋಂದಣಿ ಮಾಡದೇ ಇದ್ದರೆ (ನಿಮ್ಮ ಇ-ಕೆವೈಸಿ ಹೊಂದಿಲ್ಲದಿದ್ದರೆ) ಆಧಾರ್ ಒಟಿಪಿ ಮುಖಾಂತರ ಇ-ಕೆವೈಸಿ ಮಾಡಿಕೊಂಡು ಕಾರ್ಡ್ನ್ನು ಪಡೆಯಬಹುದಾಗಿದೆ.
ಅತೀ ಮುಖ್ಯವಾಗಿ ಆಯುಷ್ಮಾನ್ ಭವಃ ಕಾರ್ಡ್ ಪಡೆಯಲು ಪ್ರತಿ ಕುಟುಂಬವು ಎಪಿಎಲ್ ಅಥವಾ ಬಿಪಿಎಲ್ ರೇಷನ್ ಕಾರ್ಡ್ ತಪ್ಪದೇ ಹೊಂದಿರಬೇಕು. ರೇಷನ್ ಕಾರ್ಡ್ಗಳಿಗೆ ಆಧಾರ್ ಸಂಖ್ಯೆ ಜೋಡಣೆಯಾಗಿರಬೇಕು. ಸಾರ್ವಜನಿಕರು ತಮ್ಮ ಸ್ಮಾರ್ಟ್ ಮೊಬೈಲ್ಗಳ ಮೂಲಕ ಯಾವುದೇ ವೆಚ್ಚವಿಲ್ಲದೇ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಆಯುಷ್ಮಾನ್ ಭವಃ ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ಗಳನ್ನು ಪಡೆದುಕೊಳ್ಳಬಹುದಾಗಿದೆ. ತಾಂತ್ರಿಕವಾಗಿ ಯಾವುದೇ ತೊಂದರೆ ಕಂಡುಬಂದಲ್ಲಿ ಸಹ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು