alex Certify ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಸೈಕಲ್ ಭಾಗ್ಯʼ ಪುನಾರಾರಂಭ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ʻಸೈಕಲ್ ಭಾಗ್ಯʼ ಪುನಾರಾರಂಭ!

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಿದ್ಯಾರ್ಥಿಗಳಿಗೆ ಸೈಕಲ್‌ ನೀಡುವ ಯೋಜನೆಯನ್ನು ಪುನಾರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಸೈಕಲ್‌ ಯೋಜನೆ ಪುನಾರಾರಂಭಕ್ಕೆ ಶಿಕ್ಷಣ ಇಲಾಖೆಯು 320 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದು, ಫೆ. ೧೬ ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ ನಲ್ಲಿ ಈ ಬಗ್ಗೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್‌ ಜೊತೆಗೆ ಉತ್ತಮ ಗುಣಮಟ್ಟದ ಶೂ, ಸಾಕ್ಸ್‌ ವಿದ್ಯಾರ್ಥಿಗಳು ಕೂಡುವುದಕ್ಕೆ ಬೆಂಚ್‌, ಪೌಷ್ಠಿಕ ಆಹಾರಕ್ಕಾಗಿ ರಾಗಿಮಲ್ಟ್‌, ಮೊಟ್ಟೆ ಸೇರಿದಂತೆ ವಿವಿಧ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಜೊತೆಗೆ ಸೈಕಲ್‌ ಯೋಜನೆಗೆ 320 ಕೋಟಿ ರೂ. ಅನುದಾನ ಅಗತ್ಯವಿದ್ದು, ಮುಂದಿನ ಬಜೆಟ್‌ ನಲ್ಲಿ ಮೀಸಲಿಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...