ಪದಾಧಿಕಾರಿಗಳ ನೇಮಕ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರ ಮಾರಾಮಾರಿ

ಚಿಕ್ಕಮಗಳೂರು: ಬಿಜೆಪಿ ತಾಲೂಕು ಘಟಕಗಳ ನೂತನ ಅಧ್ಯಕ್ಷರ ಹೆಸರು ಘೋಷಣೆಯಾದ ಬೆನ್ನಲ್ಲೇ ಮೂಡಿಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಮಾರಮಾರಿ ನಡೆದಿದೆ.

ಶುಕ್ರವಾರ ಸಂಜೆ ಕಾರ್ಯಕರ್ತರ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರತನ್, ಹಾಲಿ ಸದಸ್ಯ ಅನುಕುಮಾರ್ ನಡುವೆ ರಸ್ತೆಯಲ್ಲೇ ಹೊಡೆದಾಟ ನಡೆದಿದೆ. ರತನ್ ಅವರ ಶರ್ಟ್ ಮತ್ತು ಬನಿಯನ್ ಹರಿದು ಹಾಕಲಾಗಿದ್ದು, ರಸ್ತೆಯಲ್ಲೇ ಉರುಳಿಸಲಾಗಿದೆ. ಗಲಾಟೆ ವಿಡಿಯೋ ಜಾಲತಾಣಗಳಲ್ಲಿ ಹರಿದಾಡಿದೆ.

ಮೂಡಿಗೆರೆ ಬಿಜೆಪಿ ಮಂಡಲದ ಅಧ್ಯಕ್ಷರಾಗಿ ಟಿ.ಎಂ. ಗಜೇಂದ್ರ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ಘೋಷಣೆ ಮಾಡಿದ್ದಾರೆ. ಇದಾದ ನಂತರ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿ ಸೇರಿದ್ದರು. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಅನುಕುಮಾರ್ ತಮಗೆ ಅಧ್ಯಕ್ಷ ಸ್ಥಾನ ತಪ್ಪಿಸಲು ರತನ್ ಕಾರಣ ಎಂದು ವಾಗ್ವಾದ ನಡೆಸಿದ್ದಾರೆ. ಇಬ್ಬರ ನಡುವಿನ ಜಗಳ ರಸ್ತೆಗೆ ಬಂದು ಮಾರಾಮಾರಿ ನಡೆದಿದೆ. ಗಾಯಗೊಂಡ ರತನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read