alex Certify ವಿಪಕ್ಷ ನಾಯಕ ಎಂಬ ಗೌರವಾನ್ವಿತ ಹುದ್ದೆಯಲ್ಲಿದ್ದು ಶಾಲಾ ಬಾಲಕನಂತೆ ವರ್ತಿಸಬೇಡಿʼ : ಆರ್. ಅಶೋಕ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಪಕ್ಷ ನಾಯಕ ಎಂಬ ಗೌರವಾನ್ವಿತ ಹುದ್ದೆಯಲ್ಲಿದ್ದು ಶಾಲಾ ಬಾಲಕನಂತೆ ವರ್ತಿಸಬೇಡಿʼ : ಆರ್. ಅಶೋಕ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು :   ಅಶೋಕರವರೆ, ನೀವು ವಿಪಕ್ಷ ನಾಯಕರೋ.? ಅಥವಾ ನಿಮ್ಮ ಗತಕಾಲದ ಪುಡಾರಿಯ ಭ್ರಮೆಯಿಂದ ನೀವಿನ್ನೂ ಹೊರಗೆ ಬಂದಿಲ್ಲವೋ.? ಅರ್ಥವಾಗುತ್ತಿಲ್ಲ ಎಂದು ಸಚಿವ ದಿನೇಶ ಗುಂಡೂರಾವ್‌ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯರ ಬಗ್ಗೆ  ಪುಡಾರಿಗಳ ರೀತಿ ಮೀಮ್ಸ್‌ಗಳನ್ನು ಎಕ್ಸ್ ಖಾತೆಯಲ್ಲಿ ಶೇರ್ ಮಾಡುವ ನಿಮ್ಮನ್ನು ರಾಜ್ಯದ ಜನ ಏನೆಂದುಕೊಳ್ಳಬೇಕು.? ನಿಮಗಲ್ಲದಿದ್ದರೂ ನೀವಿರುವ ಸ್ಥಾನಕ್ಕೆ ಘನತೆ  ತರುವಂತೆ ವರ್ತಿಸಬೇಕಲ್ಲವೇ.? ಪ್ರಶ್ನಿಸಿದ್ದಾರೆ.

ಪುಡಾರಿಗಳಂತೆ ಮೀಮ್ಸ್‌ಗಳನ್ನು ಶೇರ್ ಮಾಡಿ ಅಧಿಕ ಪ್ರಸಂಗತನ ತೋರಿಸಿ ವಿಪಕ್ಷ ನಾಯಕ ಎಂಬ ಹುದ್ದೆಯನ್ನೇ ಹಾಸ್ಯಾಸ್ಪದಕ್ಕೀಡು ಮಾಡುತ್ತಿದ್ದೀರಲ್ಲಾ, ನಿಮ್ಮ ಪ್ರಬುದ್ಧತೆಯ ಮಟ್ಟ ಎಷ್ಟಿರಬಹುದು‌.?ಅಶೋಕರವರೆ ಆತ್ಮಾವಲೊಕನ ಮಾಡಿಕೊಳ್ಳಿ. ನಿಮ್ಮದು ಸಾಂವಿಧಾನಿಕ ಹುದ್ದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಶೋಕರವರೆ‌, ನೀವು ಪುಡಾರಿಗಳಂತೆ ಮೀಮ್ಸ್‌ಗಳನ್ನು ಶೇರ್ ಮಾಡುವ ಬದಲು ಅಧಿವೇಶನ ನಡೆಯುತ್ತಿದೆ, ನಿಮ್ಮ ಮೋದಿ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯವೇ ಆಗಿಲ್ಲವೆಂದರೆ ಅಂಕಿ- ಅಂಶದ ಜೊತೆ ಸದನದಲ್ಲಿ ವಾದ ಮಾಡಿ. ನಿಮ್ಮ ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಹಾಗೂ ಕನ್ನಡಿಗರಿಗೆ ಆಗಿರುವ ದ್ರೋಹವನ್ನು ದಾಖಲೆ ಸಮೇತ‌ ನಿಮ್ಮ ಎದೆ ಬಗೆಯುವಂತೆ ವಿವರಿಸಿ ತೋರಿಸುವ ತಾಕತ್ತು ನಮಗಿದೆ. ವಿಪಕ್ಷ ನಾಯಕ ಎಂಬ ಗೌರವಾನ್ವಿತ ಹುದ್ದೆಯಲ್ಲಿದ್ದು ಶಾಲಾ ಬಾಲಕನಂತೆ‌ ವರ್ತಿಸಬೇಡಿ ಎಂದು ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...