BREAKING: ಸುಗಂಧದ್ರವ್ಯ ಫ್ಯಾಕ್ಟರಿ ಅಗ್ನಿ ದುರಂತ ಪ್ರಕರಣ: ಮತ್ತೊಬ್ಬ ಬಾಲಕ ಸಾವು: ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರು: ಪರ್ಫ್ಯೂಮ್ ಫ್ಯಾಕ್ಟರಿ ಗೋದಾನಿನಲ್ಲಿ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೊಬ್ಬ ಬಾಲಕ ಸಾವನ್ನಪ್ಪಿದ್ದಾನೆ. ಇದರೊಂದಿಗೆ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ 15 ವರ್ಷದ ರಿಯಾನ್ ಭಾಷಾ ಮೃತಪಟ್ಟಿದ್ದಾನೆ. ಕಳೆದ ನಾಲ್ಕು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ನಿನ್ನೆ ಚಿಕಿತ್ಸೆ ಫಲಿಸದೇ 15 ವರ್ಷದ ಬಾಲಕ ಸಾಜಿದ್ ಮೃತಪಟ್ಟಿದ್ದ. ರಿಯಾನ್ ತನ್ನ ತಂದೆಗೆ ಊಟ ಕೊಡಲು ಬಂದಿದ್ದಾಗ ದುರಂತ ಸಂಭವಿಸಿತ್ತು. ರಿಯಾನ್, ಸಂಬಂಧಿ ಸಾಜಿದ್ ಇಬ್ಬರೂ ಫ್ಯಾಕ್ಟರಿಗೆ ಬಂದಿದ್ದರು. ಚಿಕಿತ್ಸೆ ಫಲಿಸದೇ ಗಾಯಗೊಂಡಿದ್ದ ಇಬ್ಬರೂ ಬಾಲಕರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ. ಕುಂಬಳಗೋಡು ಠಾಣಾ ವ್ಯಕ್ತಿಯಲ್ಲಿ ಅಗ್ನಿ ದುರಂತ ಸಂಭವಿಸಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read