BREAKING : ಬೆಂಗಳೂರಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟಕ್ಕೆ ಯುವಕ ಬಲಿ, ಮತ್ತೋರ್ವನ ಸ್ಥಿತಿ ಗಂಭೀರ

ಬೆಂಗಳೂರು : ಬೈಕ್ ವ್ಹೀಲಿಂಗ್ ಹುಚ್ಚಾಟಕ್ಕೆ ಯುವಕ ಬಲಿಯಾಗಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೋಲ್ ಬಳಿಯ ದಾಸನಹಳ್ಳಿಯಲ್ಲಿ ನಡೆದಿದೆ.

2 ಬೈಕ್ ಗಳ ನಡುವೆ ಡಿಕ್ಕಿ ಪರಸ್ಪರ ಡಿಕ್ಕಿ ಸಂಭವಿಸಿದೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ರಾಜೇಶ್ (18) ಎಂಬ ಯುವಕ ಮೃತಪಟ್ಟರೆ, ಸೊಹೈಲ್ , ಕೆಂಪರಾಜು ಹಾಗೂ ತರುಣ್ ಗೆ ಗಂಭೀರ ಗಾಯಗಳಾಗಿದೆ. ಸೊಹೈಲ್ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

 ಬೈಕ್ ವ್ಹೀಲಿಂಗ್ ನಡೆಸುತ್ತಿದ್ದಾಗ 2 ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಪೊಲೀಸರು ಬೈಕ್ ವ್ಹೀಲಿಂಗ್ ಮಾಡುವವರಿಗೆ ಎಚ್ಚರಿಕೆ ನೀಡಿದರೂ ಪುಂಡರು ಮಾತ್ರ ಬೈಕ್ ಮತ್ತೆ ತಮ್ಮ ಚಾಳಿ ಮುಂದುವರೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read