![](https://kannadadunia.com/wp-content/uploads/2024/02/WhatsApp-Image-2024-02-28-at-7.36.35-PM.jpeg)
ಬೆಂಗಳೂರು : ಬೆಂಗಳೂರು ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27ರಂದು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನಡೆದ ಯುವ ಸಮೃದ್ಧಿ ಸಮ್ಮೇಳನದಲ್ಲಿ ಸುಮಾರು 9,651 ಉದ್ಯೋಕಾಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ನೀಡುವ ಮೂಲಕ ಹೊಸ ದಾಖಲೆ ಬರೆದಿದ್ದೇವೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕೌಶಲ್ಯಾಭಿವೃದ್ಧಿ ಇಲಾಖೆಯು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಯಶಸ್ವಿಯಾಗಿ ಕೊನೆಗೊಂಡಿದೆ. ಉದ್ಯೋಗ ಬಯಸಿ ಹೆಸರು ನೋಂದಾಯಿಸಿಕೊಂಡಿದ್ದ ದಾಖಲೆಯ 86,088 ಉದ್ಯೋಗಾಂಕ್ಷಿಗಳು ಮೇಳದಲ್ಲಿ ಕಂಪನಿಗಳಿಗೆ ಸ್ವ- ವಿವರ ಸಲ್ಲಿಸಿದ್ದಾರೆ. ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಒಂದೇ ಸೂರಿನಡಿ ಉದ್ಯೋಗಾವಕಾಶಗಳಿದ್ದವು. ಇಂತಹ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿರುವುದು ದೇಶದಲ್ಲೇ ಮೊದಲು ಎಂದು ತಿಳಿಸಿದ್ದಾರೆ.