alex Certify ʻಪವರ್ ಕಟ್ʼ ಆತಂಕದಲ್ಲಿದ್ದ ಜನತೆಗೆ ನೆಮ್ಮದಿಯ ಸುದ್ದಿ : ರಾಜ್ಯದಲ್ಲಿ ಸದ್ಯಕ್ಕಿಲ್ಲ ʻಲೋಡ್ ಶೆಡ್ಡಿಂಗ್ʼ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʻಪವರ್ ಕಟ್ʼ ಆತಂಕದಲ್ಲಿದ್ದ ಜನತೆಗೆ ನೆಮ್ಮದಿಯ ಸುದ್ದಿ : ರಾಜ್ಯದಲ್ಲಿ ಸದ್ಯಕ್ಕಿಲ್ಲ ʻಲೋಡ್ ಶೆಡ್ಡಿಂಗ್ʼ!

 

ಬೆಂಗಳೂರು : ಪವರ್‌ ಕಟ್‌ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಪರೀಕ್ಷಾ ಸಮಯವಾಗಿರುವುದರಿಂದ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಮಾಡದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ.  

ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಅನಧಿಕೃತ ಲೋಡ್‌ ಶೆಡ್ಡಿಂಗ್‌ ಮಾಡುವ ಆತಂಕ ಶುರುವಾಗಿತ್ತು. ಹೀಗಾಗಿ ಇಂಧನ ಇಲಾಖೆ ಈ ಬಗ್ಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಮಾಡದಂತೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಎಸ್‌ ಎಸ್‌ ಎಲ್‌ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಸಮಯವಾಗಿರುವುದರಿಂದ ಇಂಧನ ಇಲಾಖೆ ಲೋಡ್‌ ಶೆಡ್ಡಿಂಗ್‌ ಮಾಡದಂತೆ ಎಸ್ಕಾಂಗಳಿಗೆ ಸೂಚನೆ ನೀಡಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...