alex Certify ‘ಪೌರತ್ವ ಕಾಯ್ದೆ’ ಜಾರಿ ಕೇಂದ್ರದ ಚುನಾವಣೆ ಗಿಮಿಕ್-ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪೌರತ್ವ ಕಾಯ್ದೆ’ ಜಾರಿ ಕೇಂದ್ರದ ಚುನಾವಣೆ ಗಿಮಿಕ್-ಸಿಎಂ ಸಿದ್ದರಾಮಯ್ಯ

ಉಡುಪಿ : ಕೇಂದ್ರ ಸರ್ಕಾರ ‘ಪೌರತ್ವ ಕಾಯ್ದೆ’ ಜಾರಿ ಮಾಡಿದ್ದು ಚುನಾವಣೆ ಗಿಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಡುಪಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಸರ್ಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ.

ಇಷ್ಟು ವರ್ಷಗಳ ಕಾಲ ಸಿಎಎ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಜಯಪ್ರಕಾಶ್ ಹೆಗಡೆಯವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...