ಚುನಾವಣಾ ಬಾಂಡ್ ಸರಿಯಾದ ಮಾಹಿತಿ ನೀಡದ ಎಸ್‌ಬಿಐಗೆ ಸುಪ್ರೀಂ ಕೋರ್ಟ್ ತರಾಟೆ: ಎಲ್ಲಾ ವಿವರ ನೀಡುವಂತೆ ಕಟ್ಟುನಿಟ್ಟಿನ ತಾಕೀತು

ನವದೆಹಲಿ: ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಆಯ್ದ ಮಾಹಿತಿಯ ನೀಡುವುದನ್ನು ನಿಲ್ಲಿಸಿ ಸಂಪೂರ್ಣ ಮಾಹಿತಿಯನ್ನು ಮಾರ್ಚ್ 21ರೊಳಗೆ ಬಹಿರಂಗಪಡಿಸುವಂತೆ ಎಸ್.ಬಿ.ಐ.ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ತಾಕೀತು ಮಾಡಿದೆ.

ಚುನಾವಣಾ ಬಾಂಡ್ ಖರೀದಿದಾರರು ಮತ್ತು ಅದನ್ನು ಸ್ವೀಕರಿಸಿದ ರಾಜಕೀಯ ಪಕ್ಷಗಳ ಸಂಬಂಧ  ಬಹಿರಂಗಪಡಿಸುವ ವಿಶಿಷ್ಟ ಬಾಂಡ್ ನಂಬರ್ ಗಳ ಸಮಗ್ರ ಮಾಹಿತಿ ಕೂಡ ಹೊಂದಿರಬೇಕು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠದಿಂದ ನಿರ್ದೇಶನ ನೀಡಲಾಗಿದೆ.

ಆಯ್ದ ಮಾಹಿತಿ ನೀಡಿದ ಎಸ್.ಬಿ.ಐ. ಅನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ ಸಮಗ್ರ ಮಾಹಿತಿ ನೀಡಲು ಮೂರು ದಿನಗಳ ಗಡುವು ನೀಡಿದೆ. ಚುನಾವಣೆ ಬಾಂಡ್ ಗಳಿಗೆ ಸಂಬಂಧಿಸಿದಂತೆ ತಾನು ಎಲ್ಲ ಮಾಹಿತಿ ನೀಡಿರುವುದಾಗಿ ಪ್ರಮಾಣ ಪತ್ರವನ್ನು ಮಾರ್ಚ್ 21ರ ಗುರುವಾರ ಸಂಜೆ 5 ಗಂಟೆಯೊಳಗೆ ಎಸ್.ಬಿಐ. ಮುಖ್ಯಸ್ಥರು ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read