ಬೆಂಗಳೂರು : ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದ್ದು, ಟ್ಯಾಂಕರ್ ನೀರಿಗಾಗಿ ಜನರು ಮುಗಿಬಿದ್ದಿದ್ದಾರೆ. ಕೆಲವು ಕಡೆ ಟ್ಯಾಂಕರ್ ಮಾಲೀಕರು ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಖಾಸಗಿ ಟ್ಯಾಂಕರ್ ಮಾಲೀಕರು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರ ವಸೂಲಿ ಮಾಡುತ್ತಿರುವುದರ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಬೆಂಗಳೂರಿನ ನಿವಾಸಿಗಳಲ್ಲಿ ನನ್ನ ಮನವಿಯೇನೆಂದರೆ ಟ್ಯಾಂಕರ್ ಮಾಲೀಕರು ಅಕಸ್ಮಾತ್ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದರೆ ಕೂಡಲೇ ಬಿಬಿಎಂಪಿ ಸಹಾಯವಾಣಿ 1533ಕ್ಕೆ ಕರೆ ಮಾಡಿ ದೂರು ಸಲ್ಲಿಸಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.