ಪಾರ್ಕಿಂಗ್ ವಿಚಾರಕ್ಕೆ ಗಲಾಟೆ: ಮನೆಗೆ ನುಗ್ಗಿ ಮಹಿಳೆಯರು ಸೇರಿ 8 ಮಂದಿ ಮೇಲೆ ಹಲ್ಲೆ

ಬೆಂಗಳೂರು: ಆಟೋ ಪಾರ್ಕಿಂಗ್ ವಿಚಾರಕ್ಕೆ ಅಕ್ಕ-ಪಕ್ಕದವರ ಮನೆಯವರ ನಡುವೆ ಗಲಾಟೆ ನಡೆದ ಘಟನೆ ಪ್ರಗತಿಪುರ ಬಡಾವಣೆಯಲ್ಲಿ ನಡೆದಿದೆ.

ಶಿವಕುಮಾರ್ ಕುಟುಂಬದವರು ಸೇರಿ ಎಂಟು ಜನರ ಮೇಲೆ ಸೈಯದ್ ತಾಹ ಮತ್ತು ಆತನ ಕಡೆಯವರು ಮನೆಗೆ ನುಗ್ಗಿ ಮಹಿಳೆಯರು ಸೇರಿ 8 ಜನರ ಮೇಲೆ ಹಲ್ಲೆ ನಡೆಸಿದ್ದಾರೆ. ಸೈಯದ್ ತಾಹ ಸಂಬಂಧಿ ಯುವಕ, ಆತನ ಕಡೆಯವರು ಹಲ್ಲೆ ಮಾಡಿದ್ದಾರೆ.

ನಾಲ್ವರು ಮಹಿಳೆಯರು ಹಾಗೂ ನಾಲ್ವರು ಪುರುಷರ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಣ್ಣ ರಸ್ತೆಯ ಏರಿಯಾದ ಅಕ್ಕಪಕ್ಕದ ನಿವಾಸಿಗಳಾಗಿರುವ ಶಿವಕುಮಾರ್ ಮತ್ತು ಸೈಯದ್ ನಡುವೆ ಗಲಾಟೆಯಾಗಿದೆ. ತಮ್ಮ ಮನೆಯ ಮುಂದೆ ಶಿವಕುಮಾರ್ ಆಟೋ ನಿಲ್ಲಿಸಿಕೊಂಡಿದ್ದರು. ತಾಹ ಮನೆಯ ಮುಂದೆ ಆತನ ಸಂಬಂಧಿ ಆಟೋ ನಿಲ್ಲಿಸಿದ್ದ.

ವೇಗವಾಗಿ ಬಂದು ಆಟೋ ನಿಲ್ಲಿಸಿದ್ದಕ್ಕೆ ತಾಹ ಸಂಬಂಧಿಯನ್ನು ಪಕ್ಕದ ಮನೆ ನಿವಾಸಿ ಶಿವಕುಮಾರ್ ಮತ್ತು ಕುಟುಂಬದವರು ಪ್ರಶ್ನಿಸಿದ್ದಾರೆ. ಈ ವೇಳೆ ಪರಸ್ಪರ ಗಲಾಟೆ ನಡೆಯುತ್ತಿದ್ದಾಗ ಘಟನೆ ಸ್ಥಳಕ್ಕೆ ತೆರಳಿದ್ದ ಅಪರಿಚಿತ ಪಕ್ಕದಲ್ಲಿ ಇದ್ದ ಮಸೀದಿಯಿಂದ ಜೊತೆಗಾರರೊಂದಿಗೆ ಬಂದು ಮತ್ತೆ ಗಲಾಟೆ ಮಾಡಿದ್ದಾನೆ. ಶಿವಕುಮಾರ್ ಮನೆಗೆ ನುಗ್ಗಿ ಅನ್ಯಕೋಮಿನ ಗುಂಪಿನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಹಲ್ಲೆ ನಡೆಸಿ ನಾಪತ್ತೆಯಾದವರಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಗಲಾಟೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read