ತುಮಕೂರು : ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಘೋಷಣೆ ಮಾಡಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವತರ್ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ್ರೆ ರೈತರ ಸಾಲಮನ್ನಾ ಮಾಡಲಾಗುತ್ತದೆ, ರೈತರಿಗಾಗಿ ಹೊಸ ಕಾನೂನು ಜಾರಿಗೆ ತರುತ್ತೇವೆ. ಯುವಕರಿಗೆ ಕೌಶಲಾಭಿವೃದ್ದಿ ಯೋಜನೆಯಡಿ ತರಬೇತಿ ಜೊತೆ ಭತ್ಯೆ ನೀಡುತ್ತೇವೆ. ಮಹಾಲಕ್ಷ್ಮಿ ಯೋಜನೆಯಡಿ ಪ್ರತಿ ವರ್ಷಕ್ಕೆ ಮಹಿಳೆಯರಿಗೆ 1 ಲಕ್ಷ ಹಣ ಜಮಾ ಮಾಡಲಾಗುತ್ತದೆ ಎಂದರು.
ಕಾಂಗ್ರೆಸ್ ಕರ್ನಾಟಕದಲ್ಲಿ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಂತೆಯೇ ದೇಶದ ಮಹಿಳೆಯರಿಗಾಗಿ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ 5 ಹೊಸ ಪಂಚ ಗ್ಯಾರಂಟಿ ಯೋಜನೆ ಘೋಷಿಸಿದೆ. ಮಹಾಲಕ್ಷ್ಮಿ ಯೋಜನೆ, ಆದಿ ಅಬಾದಿ ಪೂರಾ ಹಕ್ ಯೋಜನೆ, ಶಕ್ತಿ ಕಾ ಸಮ್ಮಾನ್, ಅಧಿಕಾರ ಮೈತ್ರಿ ಯೋಜನೆ, ಸಾವಿತ್ರಿ ಬಾಯಿ ಪುಲೆ ಹಾಸ್ಟೆಲ್ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿದೆ.