ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೆ ಒತ್ತಾಯಿಸಿ ಬಿಜೆಪಿ ದೂರು

ಬೆಂಗಳೂರು: ಲೋಕಸಭೆ ಚುನಾವಣೆಗೆ ಉತ್ತರ ಕನ್ನಡ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರ ವಿರುದ್ಧ ಬಿಜೆಪಿ ದೂರು ನೀಡಿದೆ.

ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ವತಿಯಿಂದ ಕೇಂದ್ರ ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾ ಅಧಿಕಾರಿ ಕಚೇರಿಗೆ ದೂರು ನೀಡಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಪತ್ನಿಯ ಪರವಾಗಿ ಪ್ರಚಾರ ನಡೆಸುವ ಸಾಧ್ಯತೆ ಇದೆ. ತಮ್ಮ ಅಧಿಕಾರ ಬಳಸಿ ಪತ್ನಿ ಪರವಾಗಿ ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಬೇಕೆಂದು ಬಿಜೆಪಿ ಒತ್ತಾಯಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read