3 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಮಾಜಿ ಸಿಎಂ ಮೊಯ್ಲಿಗೆ ಶಾಕ್: ಕೋಲಾರ ಟಿಕೆಟ್ ಇನ್ನೂ ಸಸ್ಪೆನ್ಸ್

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆಯಾಗಿದೆ. ಚಿಕ್ಕಬಳ್ಳಾಪುರ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರಿಗೆ ನಿರಾಸೆಯಾಗಿದ್ದು, ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

ಬಳ್ಳಾರಿ ಕ್ಷೇತ್ರಕ್ಕೆ ಶಾಸಕ ಇ. ತುಕಾರಾಂ, ಚಾಮರಾಜನಗರ ಕ್ಷೇತ್ರಕ್ಕೆ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಗೆ ಟಿಕೆಟ್ ನೀಡಲಾಗಿದೆ.

ಸಚಿವ ಮುನಿಯಪ್ಪ ಮತ್ತು ಮಾಜಿ ಸಚಿವ ರಮೇಶ್ ಕುಮಾರ್ ಬಣದ ನಡುವಿನ ತೀವ್ರ ಬಿಕ್ಕಟ್ಟಿನ ಕಾರಣ ಕೋಲಾರ ಕ್ಷೇತ್ರ ಅಭ್ಯರ್ಥಿಯನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 7. ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿತ್ತು. ಮೂರನೇ ಪಟ್ಟಿಯಲ್ಲಿ ಮೂರು ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆಯಾಗಿದೆ. ಕೋಲಾರ ಕ್ಷೇತ್ರದ ಅಭ್ಯರ್ಥಿ ಯಾರೆಂಬುದು ಇನ್ನೂ ನಿರ್ಧಾರವಾಗಿಲ್ಲ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read