ಬಿಜೆಪಿ 400 ಸ್ಥಾನ ಗಳಿಸಲು ಮೋದಿಯಿಂದ ‘ಮ್ಯಾಚ್ ಫಿಕ್ಸಿಂಗ್’, ಅಂಪೈರ್ ಗಳೂ ಆಯ್ಕೆ: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮ್ಯಾಚ್ ಫಿಕ್ಸಿಂಗ್ ಇಲ್ಲದೆ ಪಕ್ಷದ 400 ಪಾರ್ ಘೋಷಣೆ ಸಾಧ್ಯವಿಲ್ಲ. “400 ಪಾರ್” ಗಾಗಿ ಪ್ರಧಾನಿ “ಅಂಪೈರ್” ಗಳನ್ನು ಆಯ್ಕೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಆಪ್, ಇಂಡಿಯಾ ಬ್ಲಾಕ್‌ನ ಉನ್ನತ ನಾಯಕರು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಿದ ‘ಲೋಕತಂತ್ರ ಬಚಾವೋ’ ರ್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಇವಿಎಂಗಳು, ಮ್ಯಾಚ್ ಫಿಕ್ಸಿಂಗ್, ಸಾಮಾಜಿಕ ಮಾಧ್ಯಮಗಳು ಮತ್ತು ಪತ್ರಿಕಾ ಒತ್ತಡವಿಲ್ಲದೆ ಅವರು(ಬಿಜೆಪಿ) 180 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಸಾಧ್ಯವಿಲ್ಲ. ಇಂದು ಐಪಿಎಲ್ ಪಂದ್ಯಗಳು ನಡೆಯುತ್ತಿವೆ. ಅಂಪೈರ್‌ಗಳಿಗೆ ಒತ್ತಡ ಹೇರಿದಾಗ ಆಟಗಾರರನ್ನು ಖರೀದಿಸಿದಾಗ ಮತ್ತು ನಾಯಕರನ್ನು ಪಂದ್ಯಗಳನ್ನು ಗೆಲ್ಲಿಸಲು ಬೆದರಿಕೆ ಹಾಕಿದಾಗ ಅದನ್ನು ಕ್ರಿಕೆಟ್‌ನಲ್ಲಿ ಮ್ಯಾಚ್ ಫಿಕ್ಸಿಂಗ್ ಎಂದು ಕರೆಯಲಾಗುತ್ತದೆ. ನಮ್ಮ ಮುಂದೆ ಲೋಕಸಭೆ ಚುನಾವಣೆ ಇದೆ; ಅಂಪೈರ್‌ಗಳನ್ನು ಆಯ್ಕೆ ಮಾಡಿದ್ದು ಪ್ರಧಾನಿ ಮೋದಿ. ಪಂದ್ಯಕ್ಕೂ ಮುನ್ನವೇ ನಮ್ಮ ತಂಡದ ಇಬ್ಬರು ಆಟಗಾರರನ್ನು ಬಂಧಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಅತಿದೊಡ್ಡ ವಿರೋಧ ಪಕ್ಷವಾಗಿದ್ದು, ಚುನಾವಣೆಯ ಮಧ್ಯದಲ್ಲಿ ನಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ಮುಚ್ಚಲಾಗಿದೆ. ಪ್ರಚಾರ ಮಾಡಬೇಕು. ರಾಜ್ಯಗಳಿಗೆ ಕಾರ್ಯಕರ್ತರನ್ನು ಕಳುಹಿಸಬೇಕು, ಪೋಸ್ಟರ್‌ ಗಳನ್ನು ಹಾಕಬೇಕು, ಆದರೆ ನಮ್ಮ ಎಲ್ಲಾ ಬ್ಯಾಂಕ್ ಖಾತೆಗಳನ್ನು ಮುಚ್ಚಲಾಗಿದೆ, ಯಾವ ರೀತಿಯ ಚುನಾವಣೆ ಇದು” ಎಂದು ಪ್ರಶ್ನಿಸಿದರು.

ಬಡವರಿಂದ ಸಂವಿಧಾನವನ್ನು ಕಸಿದುಕೊಳ್ಳಲು ಪ್ರಧಾನಿ ಮತ್ತು 3-4 ಕ್ರೂರಿ ಬಂಡವಾಳಶಾಹಿಗಳು ಮ್ಯಾಚ್ ಫಿಕ್ಸಿಂಗ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾವು 400 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಾಗ ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ. ಈ ಚುನಾವಣೆ ಸಾಮಾನ್ಯವಲ್ಲ, ದೇಶ ಮತ್ತು ಸಂವಿಧಾನವನ್ನು ಉಳಿಸಲು, ನೀವು ಪೂರ್ಣ ಬಲದಿಂದ ಮತ ಚಲಾಯಿಸದಿದ್ದರೆ, ಅವರ ಮ್ಯಾಚ್ ಫಿಕ್ಸಿಂಗ್ ಯಶಸ್ವಿಯಾಗುತ್ತದೆ, ಅದು ಯಶಸ್ವಿಯಾದರೆ ಸಂವಿಧಾನವು ನಾಶವಾಗುತ್ತದೆ. ಸಂವಿಧಾನವೇ ಜನರ ಧ್ವನಿಯಾಗಿದೆ. ಅದು ಮುಗಿದ ದಿನ ದೇಶವು ಕೊನೆಗೊಳ್ಳುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಶಿವಸೇನಾ ಸಂಸದ ಸಂಜಯ್ ರಾವತ್, ಎನ್‌ಸಿಪಿ (ಎಸ್‌ಸಿಪಿ) ) ಮುಖ್ಯಸ್ಥ ಶರದ್ ಪವಾರ್, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಇತರರು ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read