ಮನುಷ್ಯರ ಜೀವಕ್ಕೆ ಅಪಾಯಕಾರಿ 23 ತಳಿಗಳ ನಾಯಿ ಸಾಕಣೆ ನಿಷೇಧ ಸುತ್ತೋಲೆ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಮನುಷ್ಯರ ಜೀವಕ್ಕೆ ಅಪಾಯಕಾರಿ ಮತ್ತು ಮಾರಕವಾಗಬಹುದಾದ 23 ಶ್ವಾನ ತಳಿಗಳ ಸಾಕಣೆ ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿದೆ.

ಕೇಂದ್ರ ಸರ್ಕಾರದ ಸುತ್ತೋಲೆ ಪ್ರಶ್ನಿಸಿ ಶ್ವಾನ ತರಬೇತುದಾರ ಕಿಂಗ್ ಸಾಲ್ಮನ್ ಡೇವಿಡ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ.

ತಜ್ಞರು ಸೇರಿದಂತೆ ಸಂಬಂಧಿಸಿದವರೊಂದಿಗೆ ಸಮಾಲೋಚನೆ ನಡೆಸಿ ಕೇಂದ್ರ ಸರ್ಕಾರ ಹೊಸ ಸುತ್ತೋಲೆ ಹೊರಡಿಸಬಹುದಾಗಿದೆ. ಶ್ವಾನ ತಳಿ ಪ್ರಮಾಣೀಕರಿಸುವ ಸಂಸ್ಥೆಗಳು ಮತ್ತು ಪ್ರಾಣಿಗಳ ಸಂಘಟನೆಗಳನ್ನು ಸರ್ಕಾರ ಕಡ್ಡಾಯವಾಗಿ ಆಲಿಸಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ಸ್ಟಾಫೋರ್ಡ್ ಶೇರ್ ಟೆರಿಯರ್, ಫಿಲಾ ಬ್ರೆಸಿಲ್ಟೆರೋ, ಅಮೆರಿಕನ್ ಬುಲ್ ಡಾಗ್, ಪಿಟ್ ಬುಲ್ ಟೆರಿಯರ್, ಟೋಸ ಇನು ಮೊದಲಾದ ಮನುಷ್ಯರ ಜೀವಕ್ಕೆ ಅಪಾಯಕಾರಿ ಮತ್ತು ಮಾರಕವಾದ 23 ಶ್ವಾನ ತಳಿ ಸಾಕುವಿಕೆ ನಿಷೇಧಿಸುವಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿ 2024ರ ಮಾರ್ಚ್ 12ರಂದು ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿತ್ತು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read