ಲೋಕಸಭೆ ಚುನಾವಣೆ ಹಿನ್ನಲೆ ಇಲಾಖಾ ವಿಚಾರಣೆ ಮುಂದೂಡಿದ ಬಿಎಂಟಿಸಿ

ಬೆಂಗಳೂರು: ಕರ್ತವ್ಯ ಲೋಪ ಮೊದಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಬ್ಬಂದಿ ವಿರುದ್ಧ ನಡೆಸುತ್ತಿದ್ದ ಇಲಾಖಾ ವಿಚಾರಣೆಯನ್ನು ಲೋಕಸಭಾ ಚುನಾವಣೆ ಮುಗಿಯುವವರೆಗೆ ಮುಂದೂಡಲಾಗಿದೆ.

ಬಿಎಂಟಿಸಿ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಇಲಾಖಾ ವಿಚಾರಣೆ ಮುಂದೂಡಿ ಆದೇಶಿಸಿದ್ದಾರೆ. ನಿರ್ವಾಹಕರಿಂದ ಬಸ್ ಪ್ರಯಾಣಿಕರಿಗೆ ಟಿಕೆಟ್ ನೀಡದಿರುವುದು, ತಾಂತ್ರಿಕ ಸಿಬ್ಬಂದಿ ಕರ್ತವ್ಯ ಲೋಪ ಮೊದಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಎಂಟಿಸಿಯ 200ಕ್ಕೂ ಅಧಿಕ ಸಿಬ್ಬಂದಿ ವಿರುದ್ಧ ಏಪ್ರಿಲ್ 16 ರಿಂದ ಇಲಾಖೆ ವಿಚಾರಣೆ ನಡೆಸಲು ದಿನಾಂಕ ನಿಗದಿ ಮಾಡಿ ಈ ಹಿಂದೆ ಆದೇಶಿಸಲಾಗಿತ್ತು.

ಈಗ ಲೋಕಸಭೆ ಚುನಾವಣೆ ನಡೆಯುತ್ತಿರುವುದರಿಂದ ಇಲಾಖಾ ವಿಚಾರಣೆಯನ್ನು ಚುನಾವಣೆ ಮುಗಿಯುವವರೆಗೆ ಮುಂದೂಡಿ ಆದೇಶಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read