ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ದುಡುಕಿನ ನಿರ್ಧಾರ ಕೈಗೊಂಡ ಕಾಲೇಜು ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ನೆಟ್ಟಾರಿನಲ್ಲಿ ನಡೆದಿದೆ.

ನೆಟ್ಟಾರು ನವಗ್ರಾಮದ ಚರಣ್(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮನೆಯ ಹಿಂಭಾಗದ ಮರಕ್ಕೆ ನೇಣು ಬಿದುಕೊಂಡು ಚರಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯ ಮತ್ತು ಮಾನಸಿಕ ಖಿನ್ನತೆಯಿಂದ ಅವರು ಬಳಲುತ್ತಿದ್ದರು ಎಂದು ಹೇಳಲಾಗಿದೆ.

ನವಗ್ರಾಮದ ಹುಕ್ರಪ್ಪಗೌಡ, ಜಯಂತಿ ದಂಪತಿಯ ಪುತ್ರರಾಗಿರುವ ಚರಣ್ ಗೆ ಸಹೋದರ ಇದ್ದಾರೆ. ಬೆಳ್ಳಾರೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read