alex Certify BIG NEWS: ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆ ಟೆಂಪಲ್ ರನ್: ದೇವರ ಮೊರೆಹೋದ ಹೆಚ್.ಡಿ.ರೇವಣ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆ ಟೆಂಪಲ್ ರನ್: ದೇವರ ಮೊರೆಹೋದ ಹೆಚ್.ಡಿ.ರೇವಣ್ಣ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ದೇವರ ಮೊರೆಹೋಗಿದ್ದಾರೆ.

ಪರಪ್ಪನ ಅಗ್ರಹಾರ ಜೈನಿಂದ ಬಿಡುಗಡೆಯಾಗುತ್ತಿದ್ದಂತೆ ಮಾಜಿ ಪ್ರಧಾನಿ, ತಂದೆ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿ ತಂದೆ-ತಾಯಿ ಆಶಿರ್ವಾದ ಪಡೆದ ರೇವಣ್ಣ, ಕೆಲ ಕಾಲ ದೇವೇಗೌಡರ ಜೊತೆ, ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಸಮಾಲೋಚನೆ ನಡೆಸಿದರು.

ಬಳಿಕ ಪದ್ಮನಾಭನಗರ ನಿವಾಸದಿಂದ ಜೆ.ಪಿ.ನಗರದ ಲಕ್ಷ್ಮೀ ಹೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಹೆಚ್.ಡಿ.ರೇವಣ್ಣ ನಾಳೆ ಹಾಸನದ ಹೊಳೆನರಸೀಪುರದಲ್ಲಿರುವ ದೇವಾಲಯಗಳಿಗೂ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ದೈವೀಭಕ್ತರಾಗಿರುವ ಹೆಚ್.ಡಿ.ರೇವಣ್ಣ ಜೈಲಿನಿಂದ ಬಿಡಿಗಡೆಯಾಗುತ್ತಿದ್ದಂತೆ ವಿವಿಧ ದೇವಾಲಯಗಳಿಗೆ ತೆರಳುತ್ತಿದ್ದು, ಟೆಂಪಲ್ ರನ್ ಆರಂಭಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...