ಚಲಿಸುತ್ತಿದ್ದ ರೈಲಲ್ಲಿ ಚಾಕು ಇರಿತ ಪ್ರಕರಣ: ಓರ್ವ ಸಾವು

ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಟಿಸಿ ಸೇರಿದಂತೆ ಐವರು ಪ್ರಯಾಣಿಕರಿಗೆ ಚಾಕುವಿನಿಂದ ಇರಿದಿದ್ದಾನೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾದಲ್ಲಿ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನ ಎಸ್ 8 ಬೋಗಿಯಲ್ಲಿ ಘಟನೆ ನಡೆದಿದೆ. ಟಿಕೆಟ್ ಕೇಳಿದ್ದಕ್ಕೆ ಮುಸುಕುಧಾರಿ ಅಪರಿಚಿತ ಚಾಕುವಿನಿಂದ ದಾಳಿ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ರೈಲು ಕೋಚ್ ಅಟೆಂಡರ್ ದೇವಋಷಿ ವರ್ಮಾ(23) ಸಾವನ್ನಪ್ಪಿದ್ದಾರೆ. ಟಿಸಿ ಸೇರಿದಂತೆ ಉಳಿದ ಮೂವರಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿ ಬಂಧನಕ್ಕೆ ಪೊಲೀಸ್ ತಂಡಗಳು ಶೋಧ ಕಾರ್ಯಾಚರಣೆ ನಡೆಸಿವೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read