alex Certify ಕಾರ್ ಅಡ್ಡಗಟ್ಟಿ ಚಾಲಕ, ಮಹಿಳೆಯರ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ ಅಡ್ಡಗಟ್ಟಿ ಚಾಲಕ, ಮಹಿಳೆಯರ ಮೇಲೆ ಹಲ್ಲೆ

ಬೆಳ್ತಂಗಡಿ: ಕಾರ್ ಅಡ್ಡಗಟ್ಟಿ ಚಾಲಕ ಹಾಗೂ ಕಾರ್ ನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಕನ್ಯಾಡಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಧರ್ಮಸ್ಥಳದ ನಿವಾಸಿಗಳಾದ ಅಬ್ದುಲ್ ಫಾರೂಕ್, ಮೈಮುನಾ, ಸಿದ್ದಿಕ್ ಮತ್ತು ಮಕ್ಕಳು ಉಜಿರೆಯಲ್ಲಿರುವ ಸಂಬಂಧಿಕರ ಮನೆಗೆ ಹೋಗಿ ರಾತ್ರಿ 11:30 ಸುಮಾರಿಗೆ ಧರ್ಮಸ್ಥಳಕ್ಕೆ ವಾಪಸ್ ಆಗುವಾಗ ಕನ್ಯಾಡಿ ಶಾಲೆ ಸಮೀಪ ಎರಡು ಬೈಕ್ ಗಳಲ್ಲಿ ಬಂದ ಮೂವರು ಕಾರ್ ತಡೆದಿದ್ದಾರೆ.

ಕಾರ್ ಚಾಲಕನ ಮೇಲೆ ಹಲ್ಲೆ ನಡೆಸಿ ಕಾರ್ ಕೀ ಕಸಿದುಕೊಂಡಿದ್ದಾರೆ. ಬಲವಂತವಾಗಿ ಕಾರ್ ಡೋರ್ ತೆರೆದ ಆರೋಪಿಗಳು ಮಹಿಳೆಯರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಮೊಬೈಲ್ ಕಸಿದು ಎಸೆದಿದ್ದಾರೆ. ಕಾರ್ ನಲ್ಲಿದ್ದವರು ಕೂಗಾಡಿದಾಗ ಪರಿಚಯದವರು ವಾಹನ ನಿಲ್ಲಿಸಿ ಜಗಳ ಬಿಡಿಸಿದ್ದಾರೆ. ಈ ವೇಳೆ ಆರೋಪಿಗಳು ಬೈದು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...