alex Certify ಆಕಸ್ಮಿಕವಾಗಿ ಬಂದೂಕು ಸಿಡಿದು ರಾಯಚೂರು ಮೂಲದ ‘CISF’ ಯೋಧ ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಕಸ್ಮಿಕವಾಗಿ ಬಂದೂಕು ಸಿಡಿದು ರಾಯಚೂರು ಮೂಲದ ‘CISF’ ಯೋಧ ಹುತಾತ್ಮ

ರಾಯಚೂರು : ಆಕಸ್ಮಿಕವಾಗಿ ಬಂದೂಕು ಸಿಡಿದು CISF ಯೋಧ ಹುತಾತ್ಮರಾದ ಘಟನೆ ರಾಯಚೂರಿನಲ್ಲಿ ನಡೆದಿದೆ.

ಮಾನ್ವಿ ತಾಲೂಕಿನ ಆರ್. ಜಿ ಕ್ಯಾಂಪ್ ನ ಯೋಧ ರವಿಕಿರಣ್ (37) ಮೃತರು ಎಂದು ಗುರುತಿಸಲಾಗಿದೆ. ಚೆನ್ನೈ ಏರ್ ಪೋರ್ಟ್ ಸಮೀಪದ ಕಲ್ಪಾಕ್ಷಂ ಬಳಿ ಘಟನೆ ನಡೆದಿದೆ.

CISF ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್ನತ್ತ ಅವರು ತೆರಳುವ ವೇಳೆ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್ ಆಕಸ್ಮಿಕವಾಗಿ ಸಿಡಿದಿದೆ ಎಂದು ಹೇಳಲಾಗಿದೆ. ಕುತ್ತಿಗೆ ಗುಂಡು ತಗುಲಿದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...