alex Certify BREAKING : ಮಹಾರಾಷ್ಟ್ರದ ಉಜನಿ ಡ್ಯಾಮ್ ನಲ್ಲಿ ದೋಣಿ ಮಗುಚಿ ಆರು ಮಂದಿ ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಹಾರಾಷ್ಟ್ರದ ಉಜನಿ ಡ್ಯಾಮ್ ನಲ್ಲಿ ದೋಣಿ ಮಗುಚಿ ಆರು ಮಂದಿ ನೀರುಪಾಲು

ಪುಣೆ ಜಿಲ್ಲೆಯ ಇಂದಾಪುರ ತಹಸಿಲ್ ಬಳಿಯ ಕಲಾಶಿ ಗ್ರಾಮದ ಬಳಿಯ ಉಜಾನಿ ಅಣೆಕಟ್ಟಿನ ನೀರಿನಲ್ಲಿ ಮಂಗಳವಾರ ಸಂಜೆ ದೋಣಿ ಮಗುಚಿದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ.

ನಗರದಿಂದ 140 ಕಿ.ಮೀ ದೂರದಲ್ಲಿರುವ ಪುಣೆ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ದೋಣಿಯಲ್ಲಿ ಏಳು ಮಂದಿ ಇದ್ದರು. ಅವರಲ್ಲಿ ಒಬ್ಬರು ಸುರಕ್ಷಿತವಾಗಿ ಈಜಿ ದಡ ಸೇರಿದ್ದಾರೆ. ನಂತರ ಸ್ಥಳೀಯ ಗ್ರಾಮಸ್ಥರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದವು. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪುಣೆ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ದೇಶ್ಮುಖ್ ತಿಳಿಸಿದ್ದಾರೆ.

ಘಟನೆ ನಡೆದಾಗ, ಈ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುತ್ತಿತ್ತು. ಬಲವಾದ ಗಾಳಿ ಬೀಸಿದ ಹಿನ್ನೆಲೆ ದೋಣಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...