![](https://kannadadunia.com/wp-content/uploads/2024/02/puttanna-1.png)
ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶೇ. 100ರಷ್ಟು ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಹೇಳಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಪುಟ್ಟಣ್ಣ, ಯಾರನ್ನೋ ಸಿಎಂ ಮಾಡಿದ್ದೇವೆ. ನಮ್ಮ ಮನೆ ಮಗ, ನಮ್ಮೂರಿನವರು ಸಿಎಂ ಆಗಲಿ ಬಿಡಿ. ಆದರೆ ಇವೆಲ್ಲ ನಮ್ಮಿಂದ ನಿರ್ಧಾರವಾಗುವುದಿಲ್ಲ. ನಮಗೆ ಹೈಕಮಾಂಡ್ ಇದೆ. ನಾಳೆಯೇ ಮುಖ್ಯಮಂತ್ರಿ ಮಾಡಬಹುದು ಅಥವಾ ಇನ್ಯಾವಾಗಲಾದರೂ ಮಾಡಬಹುದು. ಆದರೆ, ಯಾವತ್ತಾದರೂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ನಾವು ಶಿವಕುಮಾರ್ ಪರವಾಗಿ ಇದ್ದೇವೆ. ಹಿಂದಿನಿಂದಲೂ ಡಿ.ಕೆ. ಶಿವಕುಮಾರ್ ಬಹಳ ಕಷ್ಟಪಟ್ಟಿದ್ದಾರೆ. ಅನೇಕರು ಹಿಂಭಾಗಲಿನಿಂದ ಬಂದು ಮುಖ್ಯಮಂತ್ರಿ ಆಗಿದ್ದಾರೆ. ನಾನು ಅವರ ಹೆಸರು ಹೇಳಲು ಇಷ್ಟಪಡುವುದಿಲ್ಲ ಎಂದು ಹೇಳಿದ್ದಾರೆ.
ಹೆಚ್.ಡಿ. ದೇವೇಗೌಡರದ್ದು, ಸಿದ್ದರಾಮಯ್ಯ ಅವರದು ಹೋರಾಟದ ಜೀವನ. ಅವರನ್ನು ಬೇರೆಯವರಿಗೆ ಏಕೆ ಹೋಲಿಸುತ್ತೀರಿ ಎಂದು ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದಾರೆ.
ಗ್ಯಾರಂಟಿ ಯೋಜನೆಯ ಅಂಡರ್ ಕರೆಂಟ್ ಇದು. ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 23 ರಿಂದ 25 ಸ್ಥಾನ ಗೆಲ್ಲುತ್ತೇವೆ. ಬೆಂಗಳೂರು ಗ್ರಾಮಾಂತರದಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ. ಇನ್ನು 9 ವರ್ಷ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆ ಮುಂದುವರೆಯಲಿದೆ ಎಂದು ಪುಟ್ಟಣ್ಣ ಹೇಳಿದ್ದಾರೆ.