alex Certify ಮೀನುಗಳ ವಂಶಾಭಿವೃದ್ಧಿ ಚಟುವಟಿಕೆ ಹಿನ್ನೆಲೆ ಜೂ.1 ರಿಂದ ಮೀನುಗಾರಿಕೆ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನುಗಳ ವಂಶಾಭಿವೃದ್ಧಿ ಚಟುವಟಿಕೆ ಹಿನ್ನೆಲೆ ಜೂ.1 ರಿಂದ ಮೀನುಗಾರಿಕೆ ನಿಷೇಧ

ದುನಿಯಾ ಡಿಜಿಟಲ್ ಡೆಸ್ಕ್ : ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್, 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ, ಮೀನುಗಳನ್ನು ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣಿಯಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...