alex Certify ಮೈಸೂರಲ್ಲಿ ಆಘಾತಕಾರಿ ಘಟನೆ: ಮನೆಯಿಂದ ಹೊರ ಹೋದ ವ್ಯಕ್ತಿ ನಾಲೆ ಬಳಿ ಶವವಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಲ್ಲಿ ಆಘಾತಕಾರಿ ಘಟನೆ: ಮನೆಯಿಂದ ಹೊರ ಹೋದ ವ್ಯಕ್ತಿ ನಾಲೆ ಬಳಿ ಶವವಾಗಿ ಪತ್ತೆ

ಮೈಸೂರು: ಮನೆಯಿಂದ ಹೊರ ಹೋದ ವ್ಯಕ್ತಿ ಮೈಸೂರಿನ ವರುಣಾ ನಾಲೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಮೈಸೂರು ತಾಲೂಕಿನ ಮಾವಿನಹಳ್ಳಿ ನಿವಾಸಿಯಾಗಿರುವ ರಾಘವೇಂದ್ರ(35) ಎಂದು ಗುರುತಿಸಲಾಗಿದೆ.

ಇದೇ ಗ್ರಾಮದ ಗೋವಿಂದ, ಕರಿಯ ವಿರುದ್ಧ ಕೃತ್ಯವೆಸಗಿದ ಆರೋಪ ಕೇಳಿ ಬಂದಿದೆ. ರಾಘವೇಂದ್ರನನ್ನು ಕೊಲೆ ಮಾಡಿ ನಾಲೆಯ ಸಮೀಪ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಕೆಲವು ದಿನಗಳ ಹಿಂದೆ ರಾಘವೇಂದ್ರ ಮತ್ತು ಆರೋಪಿಗಳ ನಡುವೆ ಗಲಾಟೆ ನಡೆದಿತ್ತು. ಕ್ಷುಲ್ಲಕ ಕಾರಣಕ್ಕೆ ರಾಘವೇಂದ್ರನನ್ನು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ರಾಘವೇಂದ್ರ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ನಿನ್ನೆ ರಾತ್ರಿ ಮನೆಯಿಂದ ಹೊರ ಹೋದವರು ವಾಪಸ್ ಬಂದಿರಲಿಲ್ಲ. ಈಗ ವರುಣಾ ನಾಲೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ರಾಘವೇಂದ್ರ ಕತ್ತು, ಮುಖದ ಮೇಲೆ ಗಾಯದ ಗುರುತು ಪತ್ತೆಯಾಗಿದೆ. ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...