ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಧಿಸಿದಂತೆ ಎಸ್ಐಟಿ ತನಿಖೆ ಚುರುಕುಗೊಳಿಸಿದ್ದು, ಹೈದರಾಬಾದ್ ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ ನಲ್ಲಿದ್ದ 45 ಕೋಟಿ ರೂ ಹಣ ಜಪ್ತಿ ಮಾಡಿದೆ.
ಬಂಧಿತ ಆರೋಪಿ ಸತ್ಯನಾರಾಯನ ಒಡೆತನ ಬ್ಯಾಂಕ್ ಇದಾಗಿದ್ದು, ಇದೇ ಬ್ಯಾಂಕ್ ಖಾತೆಗೆ 94.73 ಕೋಟಿ ರೂ ವರ್ಗಾವಣೆಯಾಗಿತ್ತು. ಬ್ಯಾಂಕ್ ನ 18 ನಕಲಿ ಖಾತೆಗಳಿಗೆ 94.73 ಕೋಟಿ ವರ್ಗಾವಣೆಯಾಗಿತ್ತು.
ವರ್ಗಾವಣೆಯಾಗಿರುವ ಬಹುತೇಕ ಹಣದಲ್ಲಿ ಡ್ರಾ ಆಗಿದೆ. ಇನ್ನುಳಿದ ಹಣ ಎಲ್ಲಿಗೆ ಹೋಗಿದೆ ಎಂಬುದರ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದೆ. ಪ್ರಕರಣ ಸಂಬಂಧ ಈವರೆಗೆ ಎಸ್ಐಟಿ ಐವರನ್ನು ಬಂಧಿಸಿದೆ. ಐವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದೆ.