ಸಾವಿನಲ್ಲೂ ಸಾರ್ಥಕತೆ ಮೆರೆದ ದಂಪತಿ: ಅಂಗಾಂಗ ದಾನ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಅವರ ಅಂಗಾಂಗಗಳನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾನ ಮಾಡಿದ್ದಾರೆ.

ಮಂಡ್ಯ ತಾಲೂಕಿನ ಚಿಕ್ಕಬಾಣಸವಾಡಿಯ ಸಿ. ಮಂಜುನಾಥ್(46) ಅವರ ಪತ್ನಿ ಹೆಚ್.ಎಂ. ಸುನೀಲಾ(40) ಅಪಘಾತದಲ್ಲಿ ಮೃತಪಟ್ಟಿದ್ದರು. ಇವರಿಬ್ಬರು ತಮ್ಮ ಮದುವೆ ವಾರ್ಷಿಕೋತ್ಸವ ಅಂಗವಾಗಿ ಜೂನ್ 3ರ ಮಧ್ಯಾಹ್ನ ಬೈಕ್ ನಲ್ಲಿ ಕೆರೆಗೋಡು ಗ್ರಾಮದ ಪಂಚಲಿಂಗೇಶ್ವರ ದೇವಾಲಯಕ್ಕೆ ತೆರಳುತ್ತಿದ್ದಾಗ ಮರಿಲಿಂಗನದೊಡ್ಡಿ ಗ್ರಾಮದ ಬಳಿ ಹಿಂದಿನಿಂದ ಬಂದ ಕಾರ್ ಡಿಕ್ಕಿ ಹೊಡೆದು ಸುನೀಲಾ ಸ್ಥಳದಲ್ಲೇ ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಮಂಜುನಾಥ್ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅವರ ಅಂಗಾಂಗಗಳನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಈ ಮೂಲಕ ದಂಪತಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read