‘ದೇಸಾಯಿ’ ಚಿತ್ರದ ಲಿರಿಕಲ್ ಹಾಡು ರಿಲೀಸ್

 

ಪ್ರವೀಣ್ ಕುಮಾರ್ ಅಭಿನಯದ ನಾಗಿ ರೆಡ್ಡಿ ಬಡ ನಿರ್ದೇಶನದ ದೇಸಾಯಿ ಚಿತ್ರದ ಲಿರಿಕಲ್ ಹಾಡು ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.

‘ಒಲವು ಮೂಡೋ ಕಾಲವು’  ಎಂಬ ಈ ಹಾಡಿಗೆ ವಿಜಯ್ ಪ್ರಕಾಶ್ ಮತ್ತು ಅನುರಾಧ ಭಟ್ ಧ್ವನಿಯಾಗಿದ್ದು, ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈ ಹಾಡನ್ನು ಲಾಂಚ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಚಿತ್ರದಲ್ಲಿ ಪ್ರವೀಣ್ ಕುಮಾರ್ ಹಾಗೂ ರಾಧ್ಯ ಪ್ರಮುಖ ಪಾತ್ರದಲ್ಲಿದ್ದು, ಹರಿಣಿ, ಪ್ರಶಾಂತ್, ಮಂಜುನಾಥ್ ಹೆಗಡೆ, ಸೃಷ್ಟಿ ಒರಟ ಪ್ರಶಾಂತ್, ಚೆಲುವರಾಜು, ಮಧುಸೂದನ್ ರಾವ್, ಕಲ್ಯಾಣಿ ಉಳಿದ ಪಾತ್ರವರ್ಗದಲ್ಲಿದ್ದಾರೆ.

ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಬ್ಯಾನರ್ ನಲ್ಲಿ ಮಹಂತೇಶ್ ವಿ ಚೋಳಚಗುಡ್ಡ ನಿರ್ಮಾಣ ಮಾಡಿದ್ದಾರೆ. ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆ ನೀಡಿದ್ದು, ಪಿ.ಕೆ.ಹೆಚ್ ದಾಸ್ ಅವರ ಛಾಯಾಗ್ರಾಹಣವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read