ಬೆಂಗಳೂರು: ಕೇಂದ್ರದಲ್ಲಿ ಎನ್ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಎನ್.ಡಿ.ಎ ಸರ್ಕಾರ ಆಕಸ್ಮಿಕವಾಗಿ ರಚನೆಯಾಗಿದೆ. ತಪ್ಪಾಗಿ ಎನ್.ಡಿ.ಎ. ಸರ್ಕಾರ ರಚನೆಯಾಗಿದ್ದು, ಯಾವಾಗ ಬೇಕಾದರೂ ಬೀಳಬಹುದು ಎಂದು ಹೇಳಿದ್ದಾರೆ.
ದೇಶ ಬಲಪಡಿಸಲು ನಮ್ಮ ಕಡೆಯಿಂದ ಸಂಪೂರ್ಣ ಸಹಕಾರ ನೀಡುತ್ತೇವೆ. ಸರ್ಕಾರ ಮುಂದುವರೆಯಬೇಕು. ದೇಶವನ್ನು ಬಲಪಡಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಬಯಸುತ್ತೇವೆ. ಆದರೆಮ ಒಳ್ಳೆಯದನ್ನು ಮುಂದುವರೆಯುವುದಕ್ಕೆ ಅವಕಾಶ ನೀಡದಿರುವ ಅಭ್ಯಾಸ ಪ್ರಧಾನಿಯವರಿಗೆ ಇದೆ ಎಂದು ಖರ್ಗೆ ಹೇಳಿದ್ದಾರೆ.