ಚಿಕ್ಕಮಗಳೂರು : ಮದ್ಯ ಸೇವಿಸಿದ ಬಾಲಕ ಪೋಷಕರು ಬೈತಾರೆ ಎಂದು ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಮೇಲ್ಪಾಲ್ ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನ ಪ್ರವಚನ್ (13) ಎಂದ ಗುರುತಿಸಲಾಗಿದೆ. ಕಳೆದ 4 ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪ್ರವಚನ್ ಮೇಲ್ಪಾಲ್ ಸರ್ಕಾರಿ ಶಾಲೆಯಲ್ಲಿ 9 ನೇ ತರಗತಿ ಓದುತ್ತಿದ್ದನು. ಸಂಬಂಧಿಕರ ಮದುವೆಗೆ ಹೋಗಿದ್ದಾಗ ಪ್ರವಚನ್ ಪಾರ್ಟಿಯಲ್ಲಿ ಮದ್ಯ ಸೇವಿಸಿದ್ದಾನೆ ಎನ್ನಲಾಗಿದೆ. ಮನೆಯಲ್ಲಿ ಈ ವಿಚಾರ ತಿಳಿದರೆ ಬೈಯುತ್ತಾರೆ ಎಂದು ಹೆದರಿ ಬಾಲಕ ಸೂಸೈಡ್ ಮಾಡಿಕೊಂಡಿದ್ದಾನೆ. ಈ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಾಗಿದೆ.
