ವಿಜಯನಗರದಲ್ಲಿ ಹೊತ್ತಿ ಉರಿದ 60 ಮಂದಿ ಪ್ರಯಾಣಿಕರಿದ್ದ ಬಸ್ : ತಪ್ಪಿದ ಭಾರಿ ದುರಂತ

ವಿಜಯನಗರದಲ್ಲಿ 60 ಮಂದಿ ಪ್ರಯಾಣಿಕರಿದ್ದ ಬಸ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿದೆ.

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದೆ. ಬಸ್ ಟೈರ್ ಸ್ಪೋಟಗೊಂಡು ಬೆಂಕಿ ತಗುಲಿದೆ ಎನ್ನಲಾಗಿದೆ. ಕೂಡಲೇ 60 ಮಂದಿ ಪ್ರಯಾಣಿಕರು ಬಸ್ ನಿಂದ ಹೊರಗೆ ಓಡಿ ಬಂಡಿದ್ದು, ಭಾರಿ ದುರಂತ ತಪ್ಪಿದೆ. ಯಾರಿಗೂ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ನಾಗಶ್ರೀ ಎಂಬ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿದೆ. ಒಂದೇ ಸಮನೆ ಟಯರ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಘಟನೆ ಹಿನ್ನೆಲೆ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read