‘ನಮ್ಮ ಮೆಟ್ರೋ’ ರೈಲಿನಲ್ಲಿ ಭಿಕ್ಷೆ ಎತ್ತಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು : 500 ರೂ ದಂಡ

ಬೆಂಗಳೂರು : ನಮ್ಮ ಮೆಟ್ರೋ ರೈಲಿನಲ್ಲಿ ಭಿಕ್ಷೆ ಎತ್ತಿದ ವ್ಯಕ್ತಿ ವಿರುದ್ಧ ಕೇಸ್ ದಾಖಲಿಸಿ 500 ರೂ ದಂಡ ವಿಧಿಸಲಾಗಿದೆ.

ಕೊಪ್ಪಳ ಮೂಲದ ಮಲ್ಲಿಕಾರ್ಜುನ್ (20) ಎಂಬಾತ ಮೆಟ್ರೋದ ಒಳಗಡೆ ಮೂಕ, ಕಿವುಡ ಎಂದು ಚೀಟಿ ತೋರಿಸಿ ಭಿಕ್ಷಾಟನೆ ಮಾಡುತ್ತಿದ್ದನು. ವ್ಯಕ್ತಿಯನ್ನು ವಶಕ್ಕೆ ಪಡೆದ ಮೆಟ್ರೋ ಅಧಿಕಾರಿಗಳು ಆತನ ವಿರುದ್ಧ ಕೇಸ್ ದಾಖಲಿಸಿ 500 ರೂ. ದಂಡ ವಿಧಿಸಿದ್ದಾರೆ.

ಮೆಟ್ರೋ ರೈಲಿನೊಳಗೆ ಭಿಕ್ಷೆ ಬೇಡಿದ ಮೊದಲ ಪ್ರಕರಣ ಇದಾಗಿದ್ದು, ಪ್ರಯಾಣಿಕರಿಗೆ ತೊಂದರೆ ನೀಡಿದ ಹಿನ್ನೆಲೆ ಈತನ ವಿರುದ್ಧ ಕಾಯಿದೆ ಸೆಕ್ಷನ್ 59 ರಡಿ ಪ್ರಕರಣ ದಾಖಲಿಸಲಾಗಿದೆ. ಈತನನ್ನು ವಶಕ್ಕೆ ಪಡೆದ ಅಧಿಕಾರಿಗಳು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದಾಗ ಈತ ಕಿವುಡ, ಮೂಗನಾಗಿರುವುದು ಧೃಡವಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read