SHOCKING : ರಾಜ್ಯದಲ್ಲಿ ಘೋರ ಘಟನೆ : ಬಾವಿಗೆ ಹಾರಿ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ.!

ಧಾರವಾಡ : ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಚಿಕ್ಕ ಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ.

ನಾರಾಯಣ ಶಿಂಧೆ ಎಂಬುವವರು ತನ್ನ ತಂದೆ ವಿಠ್ಠಲ ಶಿಂಧೆ, ಮಕ್ಕಳಾದ ಶಿವಕುಮಾರ್ ಶಿಂಧೆ ಹಾಗೂ ಶ್ರೀನಿಧಿ ಶಿಂಧೆ ಜೊತೆ ಗ್ರಾಮದ ಹೊರವಲಯದಲ್ಲಿರುವ ಯಲ್ಲಮನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಗ ಶಶಿಕುಮಾರ್ 6 ನೇ ತರಗತಿಯಲ್ಲಿ ಓದುತ್ತಿದ್ದರು. ಮಗಳು ಶ್ರೀನಿಧಿ 5 ನೇ ತರಗತಿ ಓದುತ್ತಿದ್ದಳು. ಶಾಲಾ ಸಮವಸ್ತ್ರದಲ್ಲೇ ಮಕ್ಕಳನ್ನು ಕರೆದುಕೊಂಡು ಹೋಗಿ ಕೊಂಚ ಕೂಡ ಕರುಣೆ ಇಲ್ಲದೇ ತನ್ನ ತಂದೆಯ ಜೊತೆ ಸೂಸೈಡ್ ಮಾಡಿಕೊಂಡಿದ್ದಾರೆ. ಒಂದೇ ಒಟ್ಟಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದು. ಘಟನೆಗೆ ಇಡೀ ಊರಿಗೆ ಊರು ಮರುಕ ವ್ಯಕ್ತಪಡಿಸಿದೆ.

ಮೇಲ್ನೋಟಕ್ಕೆ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read