BREAKING : ತುಮಕೂರಿನಲ್ಲಿ ಕೆರೆಗೆ ಹಾರಿ ‘ದ್ವಿತೀಯ ಪಿಯುಸಿ’ ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರು : ಕೆರೆಗೆ ಹಾರಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಶಿಡ್ಲನಹಟ್ಟಿ ಗ್ರಾಮದಲ್ಲಿ ನಡೆದಿದೆ.

ಕುಣಿಗಲ್ ಪಟ್ಟಣದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಈಕೆ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಆರೋಗ್ಯ ಸಮಸ್ಯೆಯಿಂದ ಖಿನ್ನತೆಗಾಗಿ ಒಳಗಾಗಿದ್ದ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತಪಟ್ಟಿದ್ದಾಳೆ ಎನ್ನಲಾಗಿದೆ  . ಘಟನೆ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read