‘ಸೊಪ್ಪು’ ತರಲು ಕಾಡಿಗೆ ಹೋಗಿದ್ದ ರೈತನ ಮೇಲೆ ಕಾಡು ಹಂದಿ ದಾಳಿ

ಸೊಪ್ಪು ತರಲು ಕಾಡಿಗೆ ಹೋಗಿದ್ದ ರೈತರೊಬ್ಬರ ಮೇಲೆ ಕಾಡು ಹಂದಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ತುಮರಿ ಸಮೀಪದ ಕಟ್ಟಿನಕಾರು ಗ್ರಾಮದ ಕೂಡೂರಿನ ಬಳಿ ನಡೆದಿದೆ.

52 ವರ್ಷದ ಚೌಡನಾಯ್ಕ ಸೊಪ್ಪು ತರುವ ಸಲುವಾಗಿ ಮಂಗಳವಾರ ಮುಂಜಾನೆ ಬೆಟ್ಟಕ್ಕೆ ತೆರಳಿದ್ದು, ಈ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡು ಹಂದಿ ಅವರ ತೊಡೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿದೆ.

ಇದರ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದು, ನಿತ್ರಾಣಗೊಂಡಿದ್ದ ಅವರಿಗೆ ನಿಟ್ಟೂರಿನ ಖಾಸಗಿ ಕ್ಲಿನಿಕ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಈ ಭಾಗದಲ್ಲಿ ಇತ್ತೀಚೆಗೆ ಕಾಡು ಹಂದಿ ಹಾವಳಿ ಜಾಸ್ತಿಯಾಗಿದ್ದು, ಇದನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು ಕೂಡಲೇ ಈ ನಿಟ್ಟಿನಲ್ಲಿ ಕ್ರಮವಹಿಸಿ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read