ಮತ್ತೊಬ್ಬರಿಂದ ಉಡುಗೊರೆ ಸ್ವೀಕರಿಸದಂತೆ ತಾಕೀತು ; ನಿರಾಕರಿಸಿದ್ದಕ್ಕೆ ಗೆಳತಿಯನ್ನೇ ಕೊಂದ ಯುವಕ !

ದೆಹಲಿಯ ನೈಋತ್ಯ ಭಾಗದ ಕಂಟೋನ್ಮೆಂಟ್ ಪ್ರದೇಶದಲ್ಲಿ ನಡೆದ ಭೀಕರ ಘಟನೆಯಲ್ಲಿ, 20 ವರ್ಷದ ಯುವಕನೊಬ್ಬ ತನ್ನ ಅಪ್ರಾಪ್ತ ಗೆಳತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಬೇರೆ ಹುಡುಗರಿಂದ ಉಡುಗೊರೆಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಲು ಆಕೆ ನಿರಾಕರಿಸಿದ್ದೇ ಈ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಅಮಿತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಕೊಂದ ನಂತರ ಆತ ಆತ್ಮಹತ್ಯೆಗೆ ಯತ್ನಿಸಿ ತನ್ನ ಹೊಟ್ಟೆಗೆ ಚಾಕುವಿನಿಂದ ಇರಿದುಕೊಂಡಿದ್ದ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಮಾಹಿತಿ ಪ್ರಕಾರ, ಅಮಿತ್ ತನ್ನ 17 ವರ್ಷದ ಗೆಳತಿಯನ್ನು ಇತರ ಹುಡುಗರಿಂದ ಉಡುಗೊರೆಗಳನ್ನು ತೆಗೆದುಕೊಳ್ಳದಂತೆ ಹೇಳಿದ್ದನು. ಆಗ ಆಕೆ “ನಾನು ತೆಗೆದುಕೊಂಡರೆ ನೀನು ಏನು ಮಾಡಬಲ್ಲೆ? ಹೆಚ್ಚು ಮಾತನಾಡಿದರೆ ನಿನ್ನನ್ನು ಕೊಲ್ಲಿಸುತ್ತೇನೆ” ಎಂದು ಬೆದರಿಕೆ ಹಾಕಿದ್ದಳು ಎನ್ನಲಾಗಿದೆ. ಇದರಿಂದ ಕೋಪಗೊಂಡ ಅಮಿತ್ ಆಕೆಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ.

ಏಪ್ರಿಲ್ 6 ರಂದು ಸಂಜೆ ಇರಿತಕ್ಕೊಳಗಾದ ಬಾಲಕಿ, ಗಂಭೀರ ಗಾಯಗಳಿಂದಾಗಿ ಕಳೆದ ಶನಿವಾರ ಮೃತಪಟ್ಟಿದ್ದಾಳೆ. ಆಕೆಯ ಕುತ್ತಿಗೆ ಮತ್ತು ಹೊಟ್ಟೆಗೆ ಆಳವಾದ ಗಾಯಗಳಾಗಿದ್ದು, ಉಸಿರಾಟದ ನಾಳವೂ ಕತ್ತರಿಸಲ್ಪಟ್ಟಿತ್ತು. ಈ ಘಟನೆ ದೆಹಲಿಯಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read