ತುಂಗಾ ಜಲಾಶಯ ಬಳಿ ನೀರಿನಲ್ಲಿ ಕೊಚ್ಚಿಹೋದ ಯುವಕ

ಶಿವಮೊಗ್ಗ: ಭದ್ರಾವತಿಯ ಶರತ್ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ತುಂಗಾ ಜಲಾಶಯ ಬಳಿ ಯುವಕ ನೀರು ಪಾಲಾಗಿದ್ದಾನೆ.
ಶಿವಮೊಗ್ಗ ತಾಲೂಕಿನ ಗಾಜನೂರು ಜಲಾಶಯದ ಬಳಿ ನಿನ್ನೆ ಪ್ರವಾಸಕ್ಕೆ ಬಂದಿದ್ದ ವೇಳೆ ಘಟನೆ ನಡೆದಿದೆ. ಮಿಳ್ಳಘಟ್ಟದ ಹರೀಶ್(22) ನೀರು ಪಾಲಾದ ಯುವಕ ಎಂದು ಹೇಳಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯುವಕನಿಗಾಗಿ ಹುಡುಕಾಟ ನಡೆಸಲಾಗಿದೆ. ಯಾಂತ್ರಿಕ ಬೋಟ್ನಲ್ಲಿ ಯುವಕನಿಗಾಗಿ ಹುಡುಕಾಟ ನಡೆದಿದ್ದು, ಸ್ಥಳೀಯ ಮೀನುಗಾರರು, ಈಜುಗಾರರು ಕಾರ್ಯಾಚರಣೆಗೆ ಸಾಥ್ ನೀಡಿದ್ದಾರೆ.

ಡ್ಯಾಂ ಪ್ರವೇಶಕ್ಕೆ ನಿಷೇಧ ಹಿನ್ನೆಲೆ ಚಾನಲ್ ಪಕ್ಕದ ದಾರಿಯಲ್ಲಿ ಸ್ನೇಹಿತರು ಹೋಗಿದ್ದು, ಅಲ್ಲಿನ ಕಾಮಗಾರಿ ನಡೆಯುತ್ತಿರುವ ಸೇತುವೆ ಬಳಿ ಹೋಗಿದ್ದ ವೇಳೆ ಹರೀಶ್ ನೀರು ಪಾಲಾಗಿದ್ದಾನೆ ಎನ್ನಲಾಗಿದೆ. ತುಂಗಾನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read