ಆಧಾರ್ ಸೀಡಿಂಗ್ ನಿಂದಾಗಿ ಸರ್ಕಾರಕ್ಕೆ ಸಿಕ್ತು ಅಂಕಿ ಅಂಶ: ಅಕ್ರಮವಾಗಿ ಜಮೀನು ಮಾರಾಟಕ್ಕೆ ಬ್ರೇಕ್

ಬೆಂಗಳೂರು: ಆಧಾರ್‌ ಸೀಡಿಂಗ್‌ನಿಂದಾಗಿ ಸರ್ಕಾರಕ್ಕೆ ಸಾಕಷ್ಟು ಅಂಕಿಅಂಶಗಳು ಸಿಗುತ್ತಿದೆ. 36.53 ಲಕ್ಷ ಜಮೀನುಗಳಲ್ಲಿ ವ್ಯಕ್ತಿ ತೀರಿ ಹೋಗಿದ್ದರೂ, ಪಹಣಿಯಲ್ಲಿ ಅವರ ಹೆಸರೇ ಉಲ್ಲೇಖವಾಗಿರುವುದು ಆಧಾರ್‌ ಸೀಡಿಂಗ್‌ನಿಂದ ತಿಳಿದುಬಂದಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಹೀಗಾಗಿ ಎರಡು ತಿಂಗಳ ನಂತರ ಅದಾಲತ್‌ ಮೂಲಕ ಪೌತಿ ಖಾತೆ ಅಭಿಯಾನ ಆರಂಭಿಸುವ ಚಿಂತನೆ ಇದೆ. ಅಲ್ಲದೆ, ಆಧಾರ್‌ ಸೀಡಿಂಗ್‌ನಿಂದಾಗಿ ನಕಲಿ ವ್ಯಕ್ತಿ ಸೃಷ್ಟಿಸಿ ಅಕ್ರಮವಾಗಿ ಜಮೀನು ಮಾರಾಟವನ್ನು ತಪ್ಪಿಸಬಹುದು. ಬಿಟ್ಟು ಹೋದ ಸರ್ಕಾರದ ಜಮೀನುಗಳೂ ಸಹ ಇದೀಗ ಸಿಕ್ಕಿದೆ. ಒತ್ತುವರಿಯಾದದ್ದೂ ಗೊತ್ತಾಗಿದೆ ಎಂದು ಹೇಳಿದ್ದಾರೆ.

ಜಮೀನಿಗೆ ಆಧಾರ್‌ ಲಿಂಕ್‌ ಮಾಡುವಾಗ 2.20 ಲಕ್ಷ ಜಮೀನು ಸರ್ಕಾರಿ ಭೂಮಿ ಎಂದು ಗುರುತಿಸದ ಭೂಮಿ ಇವೆ ಎಂದು ತಿಳಿದುಬಂದಿದೆ. ಆಧಾರ್‌ ಸೀಡಿಂಗ್‌ ಮುಗಿಯುವುದರ ಒಳಗಾಗಿ 3 ರಿಂದ 3.50 ಲಕ್ಷ ಹೆಚ್ಚುವರಿ ಸರ್ಕಾರಿ ಭೂಮಿ ಲೆಕ್ಕಕ್ಕೆ ಬರುವ ಸಾಧ್ಯತೆ ಇದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read