BREAKING: ಗೂಡ್ಸ್ ವಾಹನ ಡಿಕ್ಕಿ: ದ್ವಿಚಕ್ರ ವಾಹನದಲ್ಲಿದ್ದ ಇಬ್ಬರ ದುರ್ಮರಣ

ಶಿವಮೊಗ್ಗ: ಗೂಡ್ಸ್ ವಾಹನ ಹಾಗೂ ಟಿವಿಎಸ್ ಎಕ್ಸ್ ಎಲ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರದಲ್ಲಿ ನಡೆದಿದೆ.

ಬೆಳಂದೂರು ಗ್ರಾಮದ ವಾಸಪ್ಪ(60), ಅವರ ಅಳಿಯ ಸತೀಶ್(40) ಮೃತಪಟ್ಟವರು ಎಂದು ಹೇಳಲಾಗಿದೆ. ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ತ್ಯಾಗರ್ತಿ ಕಡೆಗೆ ತೆರಳುತ್ತಿತ್ತು. ಟಿವಿಎಸ್ ಎಕ್ಸೆಲ್ ನಲ್ಲಿ ಇಬ್ಬರು ಆನಂದಪುರ ಕಡೆಗೆ ಹೋಗುವಾಗ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read