BREAKING: ಟಾಟಾ ಏಸ್ ವಾಹನ ಪಲ್ಟಿ: 25 ಜನರಿಗೆ ಗಂಭೀರ ಗಾಯ

ಚಾಮರಾಜನಗರ: ದೇವಸ್ಥಾನದಿಂದ ವಾಪಾಸ್ ಆಗುತ್ತಿದ್ದಾಗ ಟಾಟಾ ಏಸ್ ವಾಹನ ಪಲ್ಟಿಯಾಗಿ 25 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುಣಸೇಪಾಳ್ಯ ಬಳಿ ನಡೆದಿದೆ.

ತಟ್ಟೆಕೆರೆ ಮಹದೇಶ್ವರ ದೇವಸ್ಥಾನದಿಂದ ವಾಪಾಸ್ ಆಗುತ್ತಿದ್ದ ವೇಳೆ ಟಾಟಾ ಏಸ್ ವಾಹನ ಚಾಲಕನ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. 25 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ವಿ.ಎಸ್.ದೊಡ್ಡಿ ಗ್ರಾಮದವರು.

ಗಾಯಾಳುಗಳನ್ನು ಕೊಳ್ಳೆಗಾಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read