BREAKING: ಕಾರ್ ಪಲ್ಟಿಯಾಗಿ ನಾಡೋಜ ಬೆಳಗಲ್ಲು ವೀರಣ್ಣ ನಿಧನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಬಳಿ ನಡೆದ ಅಪಘಾತದಲ್ಲಿ ಹಿರಿಯ ರಂಗ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಸಾವನ್ನಪ್ಪಿದ್ದಾರೆ.

ಕಾರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಬಳ್ಳಾರಿ ಮೂಲದ ಬೆಳಗಲ್ಲು ವೀರಣ್ಣ ನಾಡೋಜ ಪ್ರಶಸ್ತಿ ಪುರಸ್ಕೃತರಾಗಿದ್ದು, ತೊಗಲುಗೊಂಬೆ ಆಟದ ಕಲೆಯಲ್ಲಿ ವಿಶೇಷ ಸಾಧನೆ ಮಾಡಿದ್ದರು. ಕಾರ್ ನಲ್ಲಿದ್ದ ವೀರಣ್ಣ ಅವರ ಪುತ್ರ ಹನುಮಂತಪ್ಪ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read